Advertisement

‘ನಾನೊಬ್ಬ ಆರ್.ಎಸ್.ಎಸ್’ ಹೆಚ್ ಡಿಕೆಗೆ ಭಿತ್ತಿ ಚಿತ್ರ ತೋರಿಸಿ ಭಜರಂಗದಳ ಪ್ರತಿಭಟನೆ

01:13 PM Oct 09, 2021 | Team Udayavani |

ಸಕಲೇಶಪುರ: ಮಾಜಿ ಮುಖ್ಯ ಮಂತ್ರಿ ಎಚ್.ಡಿ ಕುಮಾರಸ್ವಾಮಿಗೆ ನಾನೋಬ್ಬ ಆರ್.ಎಸ್.ಎಸ್ ಎಂದು ಭಜರಂಗದಳದ ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ಮಾಡಿದ ಘಟನೆ ಶನಿವಾರ ನಡೆಯಿತು.

Advertisement

ತಾಲೂಕಿನಲ್ಲಿ ಎತ್ತಿನಹೊಳೆ ಕಾಮಗಾರಿಯನ್ನು ವೀಕ್ಷಿಸಲು ಬಂದಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿರವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಹೊರ ಬಂದು ಕಾರಿನಲ್ಲಿ ಎತ್ತಿನಹೊಳೆ ಕಾಮಗಾರಿ ವೀಕ್ಷಿಸಲು ಹೊರಟ ಸಂದರ್ಭದಲ್ಲಿ ಎಸ್.ಬಿ.ಎಮ್ ವೃತ್ತದ ಸಮೀಪ ಸಭಜರಂಗದಳ ಕಾರ್ಯಕರ್ತರು ನಾನೊಬ್ಬ ಆರ್.ಎಸ್.ಎಸ್ ಎಂಬ ಬರಹವುಳ್ಳ ಭಿತ್ತಿ ಚಿತ್ರಗಳ ಪ್ರದರ್ಶನ ಮಾಡಿದ ಘಟನೆ ನಡೆಯಿತು.

ಇದನ್ನೂ ಓದಿ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ

ಈ ವೇಳೆ ಭಜರಂಗದಳದ ಕಾರ್ಯಕರ್ತ ರಮೇಶ್ ಎಂಬುವರು ಪೋಸ್ಟರ್ ಹಿಡಿದು ಕಾರಿಗೆ ಅಡ್ಡ ಬಂದಿದ್ದರಿಂದ ಸ್ಥಳದಲ್ಲಿದ್ದ ಡಿ.ವೈ.ಎಸ್.ಪಿ ಅನಿಲ್ ಕುಮಾರ್ ಕಾರ್ಯಕರ್ತನನ್ನು  ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next