Advertisement

ಬಜಪೆ: ಮೀನು ಫ್ಯಾಕ್ಟರಿಯಲ್ಲಿ ದುರಂತ : ಮೃತರ ಸಂಖ್ಯೆ 5 ಕ್ಕೇರಿಕೆ, ನಾಲ್ವರು ವಶಕ್ಕೆ

04:15 PM Apr 18, 2022 | Team Udayavani |

ಬಜಪೆ: ಮೀನು ಸಂಸ್ಕರಣ ಫ್ಯಾಕ್ಟರಿಯಲ್ಲಿ ಆದ ವಿಷಾನಿಲ ಸೋರಿಕೆ ದುರಂತದಲ್ಲಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮತ್ತಿಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 5 ಕ್ಕೇರಿದೆ.

Advertisement

ಮೀನು ಸಂಸ್ಕರಣಾ ಕಂಪೆನಿಯ ತ್ಯಾಜ್ಯ ಸಂಗ್ರಹ ತೊಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ  ಮೂರು ಜನ ನಿನ್ನೆ ರಾತ್ರಿ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿ ಅಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ  ಮಿರಾಜುಲ್ ಇಸ್ಲಾಂ ,ಶರಾಫತ್ ಆಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ದುರಂತದಲ್ಲಿ ಇದುವರೆಗೆ 5 ಮಂದಿ ಸಾವನ್ನಪ್ಪಿದ್ದು, ಹಸನ್ ಆಲಿ  , ಮೊಹಮ್ಮದ್ ಕರೀಬುಲ್ಲಾ , ಹಫೀಜುಲ್ಲಾ ಎಂಬುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ  ಪಡೆಯುತ್ತಿದ್ದಾರೆ.

ಕಂಪೆನಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಯಾವುದೇ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸದೇ ನಿರ್ಲಕ್ಷ ವಹಿಸಿದ ಕಂಪನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್ ,ಏರಿಯಾ ಮ್ಯಾನೇಜರ್ ಕುಬೇರ್ ಗಾಡೆ,ಮತ್ತು ಅಲ್ಲಿನ ಸೂಪರ್ವೈಸರ್ ಮೊಹಮ್ಮದ್ ಅನ್ವರ್ ಅನ್ನು ಹಾಗೂ ಕಂಪನಿಯ ಕಾರ್ಮಿಕರ ಆಗುಹೋಗುಗಳನ್ನು ನೋಡಿಕೊಳ್ಳುತ್ತಿದ್ದ ಸ್ಥಳೀಯ ವ್ಯಕ್ತಿ ಫಾರೂಕ್ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.

Advertisement

ಮೃತಪಟ್ಟವರ ಬಗ್ಗೆ  ಅವರ ಸಂಬಂಧಿಕರಿಗೆ ಮಾಹಿತಿ ನೀಡಿದ್ದು,ಮೃತದೇಹಗಳನ್ನು ಮಂಗಳೂರಿನ ಎಜೆ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಹಸ್ತಾಂತರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಪೊಲೀಸರು ಕಂಪೆನಿಗೆ ಬೀಗ ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next