Advertisement

ಬಜ್ಪೆ: ಆವರಣ ಇಲ್ಲದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

02:47 PM Dec 27, 2022 | Team Udayavani |

ಬಜ್ಪೆ: ಆವರಣ ಇಲ್ಲದ ಬಾವಿಗೆ ಆಯಾ ತಪ್ಪಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಡಿ. 27 ರಂದು ನಡೆದಿದೆ.

Advertisement

ಕೊಳಂಬೆ ತಲ್ಲದ ಬೈಲು ನಿವಾಸಿ ಪದ್ಮನಾಭ ಬೆಲ್ಚಡ (51) ಮೃತಪಟ್ಟ ವ್ಯಕ್ತಿ.

ಪದ್ಮನಾಭ ಬಜ್ಪೆಯಲ್ಲಿ ಮದ್ಯದಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಪ್ರಸ್ತುತ ಆ ಪ್ರದೇಶದಲ್ಲಿ ಸೆಕ್ಷನ್ 144 ಜಾರಿಯಲ್ಲಿರುವ ಕಾರಣ ಮನೆಯಲ್ಲೇ ಇದ್ದರು. ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಮನೆ ಸಮೀಪದ ಬಾವಿ ಬಳಿ ತೆರಳಿದಾಗ ಆಕಸ್ಮಿಕವಾಗಿ ಬಿದ್ದು ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಅಕ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ ಶವ ಮೇಲಕ್ಕೆತ್ತಿ, ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.  ಮೃತರು ಪತ್ನಿ ಹಾಗು ಪುತ್ರಿಯನ್ನು ಅಗಲಿದ್ದಾರೆ.

ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next