Advertisement

ಬಜರಂಗದಳ ಬ್ಯಾನ್‌: ಕೈ ವಿರುದ್ಧ ತಿರುಗೇಟು

10:58 PM May 03, 2023 | Team Udayavani |

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಪ್ರಸ್ತಾವಕ್ಕೆ ಬಿಜೆಪಿ, ವಿಎಚ್‌ಪಿ, ಬಜರಂಗ ದಳ ಸಹಿತ ವಿವಿಧ ಸಂಘಟನೆಗಳ ಮುಖಂಡರಿಂದ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. ಈ ನಡುವೆ ತನ್ನ ಪ್ರಣಾಳಿಕೆಯನ್ನು ಕಾಂಗ್ರೆಸ್‌ ಮುಖಂಡರು ಸಮರ್ಥಿಸಿಕೊಂಡಿದ್ದಾರಾದರೂ ಈ ವಿಚಾರ ಪ್ರಸ್ತುತ ರಾಜಕೀಯವಾಗಿ ತೀವ್ರ ಚರ್ಚೆಗೆ ಎಡೆಮಾಡಿದೆ.

Advertisement

ತಿರುಕನ ಕನಸು: ಬಿಎಸ್‌ವೈ

ಮೈಸೂರು: ಬಜರಂಗದಳ ಬ್ಯಾನ್‌ ಎನ್ನುವುದು ಕಾಂಗ್ರೆಸ್‌ ಪಾಲಿಗೆ ತಿರುಕನ ಕನಸು ಇದ್ದಂತೆ. ಕಾಂಗ್ರೆಸ್‌ನವರು ಅಧಿಕಾರಕ್ಕೆ ಬರುವುದಿಲ್ಲ. ಹೀಗಾಗಿ ಇಂತಹ ಬ್ಯಾನ್‌ ಪ್ರಶ್ನೆಗಳೇ ಉದ್ಭವಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ವಿನಾಶ ಕಾಲೇ ವಿಪರೀತ ಬುದ್ಧಿ ಬಂದಿದೆ. ಕಾಂಗ್ರೆಸ್‌ ತಿರುಕನ ಕನಸು ಕಾಣುತ್ತಿದೆ.

ಬಜರಂಗದಳ ದೇಶವ್ಯಾಪ್ತಿ ಇರುವಂತಹ ಸಂಘಟನೆ. ಇದನ್ನು ನಿಷೇಧಿಸಲು ಅಧಿಕಾರ ಇರುವುದು ಕೇಂದ್ರ ಸರಕಾರಕ್ಕೆ ಮಾತ್ರ. ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ನಿಷೇಧಿಸುತ್ತೇವೆಂದು ಹೇಳಿರುವುದು ಹಾಸ್ಯಾಸ್ಪದ. ಈ ಅಂಶವು ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶವಾಗಿದೆ.
– ಬಸವರಾಜ ಬೊಮ್ಮಾಯಿ, ಸಿಎಂ

“ಅಪರಾಧ ಹಿನ್ನೆಲೆ ಇರುವವರೇ ಬಜರಂಗದಳಕ್ಕೆ ಸೇರುತ್ತಾರೆ”
ಜೈಪುರ: “ಅಪರಾಧದ ಹಿನ್ನೆಲೆಯುಳ್ಳ ವ್ಯಕ್ತಿಗಳೇ ಬಜರಂಗ ದಳಕ್ಕೆ ಸೇರುತ್ತಾರೆ’ ಎಂದು ರಾಜಸ್ಥಾನದ ಸಚಿವ ಗೋವಿಂದ ರಾಮ್‌ ಮೇಘಾÌಲ್‌ ಬುಧವಾರ ಹೇಳಿದ್ದಾರೆ. ಜೈಪುರದಲ್ಲಿ ಮಾತನಾಡಿದ ಅವರು, ಆರೆಸ್ಸೆಸ್‌ನಲ್ಲಿ ಇರುವವರು ಸಂವಿಧಾನದ ಬಗ್ಗೆ ಯಾವುದೇ ಗೌರವ ಹೊಂದಿಲ್ಲ. ವಿಶ್ವಹಿಂದೂ ಪರಿಷತ್‌ನ ಯುವ ವಿಭಾಗವಾಗಿರುವ ಬಜರಂಗದಳಕ್ಕೆ ಅಪರಾಧದ ಹಿನ್ನೆಲೆ ಇರುವವರೇ ಸೇರಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

Advertisement

ಕೋಮು ಭಾವನೆ ಕೆರಳಿಸುವ ಸಂಘಟನೆ
ವಿಜಯಪುರ: ಕೋಮು ಭಾವನೆ ಕೆರಳಿಸುವ ಪಿಎಫ್‌ಐ, ಬಜರಂಗದಳ ಮಾತ್ರವಲ್ಲದೆ ಇದೇ ಸಾಲಿಗೆ ಸೇರುವ ಯಾವುದೇ ಧರ್ಮದ ಸಂಘಟನೆಗಳಿದ್ದರೂ ಅವುಗಳನ್ನು ನಿಷೇ ಧಿಸಲಾಗುವುದು. ಜನರ ಮುಂದೆ ಹೋಗಲು ಏನೂ ವಿಷಯ ಇಲ್ಲದ ಪ್ರಧಾನಿ ಮೋದಿ ಬಜರಂಗ ದಳ ವಿಷಯ ಪ್ರಸ್ತಾವಿಸಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌ ಆರೋಪಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ ಧಿಕಾರದಲ್ಲಿದ್ದಾಗ ಹಿಜಾಬ್‌, ಹಲಾಲ್‌ ಎಂದೆಲ್ಲ ಪ್ರಚೋದನಾತ್ಮಕ ವಿಚಾರಗಳಲ್ಲೇ ಮುಳುಗಿದ್ದ ಬಿಜೆಪಿ ನಾಯಕರಿಗೆ ಈಗ ಹೇಳಿಕೊಳ್ಳಲು ಅಭಿವೃದ್ಧಿಯ ವಿಷಯವೇ ಇಲ್ಲ. ಹೀಗಾಗಿ ಪ್ರಧಾನಿ ಮೋದಿ ಬಜರಂಗದಳ ನಿಷೇಧದ ಕುರಿತ ನಮ್ಮ ಪಕ್ಷದ ಪ್ರಣಾಳಿಕೆಯನ್ನಷ್ಟೇ ಪ್ರಸ್ತಾವಿಸುತ್ತಿದ್ದಾರೆ ಎಂದರು.

ಬಜರಂಗದಳ ನಿಷೇಧ ವಿಚಾರವನ್ನು ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್‌ ಹಿಂದೂ ವಿರೋಧಿ ಧೋರಣೆ ಪ್ರದರ್ಶಿಸಿದೆ. ಕಾಂಗ್ರೆಸ್‌ ಪಿಎಫ್ಐ ಜತೆಗೆ ಬಜರಂಗದಳ ಹೋಲಿಕೆ ಮಾಡುವುದೇ ಅಸಮಂಜಸ. ಹಿಂದೂ ಸಂಘಟನೆಯನ್ನು ಇಸ್ಲಾಂ ಭಯೋತ್ಪಾದಕ ಸಂಘಟನೆ ಜತೆ ತುಲನೆ ಮಾಡಿದ್ದಾರೆ. ಈ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ಸಂದೇಶ ನೀಡಲು ಹೊರಟಿದ್ದಾರೆ?
– ತೇಜಸ್ವಿ ಸೂರ್ಯ, ಸಂಸದ

ಇಂದು ಹನುಮಾನ್‌ ಚಾಲೀಸಾ ಪಠಣ
ಬೆಂಗಳೂರು: ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವ ಬಗ್ಗೆ ಉಲ್ಲೇಖೀಸಿರುವುದನ್ನು ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ತೀವ್ರವಾಗಿ ಖಂಡಿಸಿದೆ. ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಜರಂಗದಳ ಕರ್ನಾಟಕ ದಕ್ಷಿಣ ಪಾಂತ್ರದ ಸಂಯೋಜಕ ಗೋವರ್ಧನ್‌, ಕಾಂಗ್ರೆಸ್‌ ಪ್ರಣಾಳಿಕೆ ವಿರುದ್ಧ ಸಿಡಿದೆದ್ದಿರುವ ಬಜರಂಗದಳವು ಗುರುವಾರ ಸಂಜೆ 7ಗಂಟೆಗೆ ರಾಜ್ಯವ್ಯಾಪಿ ರಾಮ ಹಾಗೂ ಆಂಜ ನೇಯ ದೇವಸ್ಥಾನಗಳಲ್ಲಿ ಹನುಮಾನ್‌ ಚಾಲೀಸಾ ಪಠಣದ ಅಭಿ ಯಾನ ನಡೆಸಲಾಗುತ್ತದೆ. ಚುನಾವಣೆವರೆಗೆ ಮನೆಮನೆಗೆ ತೆರಳಿ ಕಾಂಗ್ರೆಸ್ಸಿಗೆ ಮತ ನೀಡದಂತೆ ಜಾಗೃತಿ ಮೂಡಿಸಲಾಗುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್‌ ತತ್‌ಕ್ಷಣ ಪ್ರಣಾಳಿಕೆ ಹಿಂಪಡೆದು ಕ್ಷಮೆ ಕೋರಬೇಕು. ಇಲ್ಲವೇ ತಾಕತ್ತಿದ್ದರೆ ತಾವು ಕೈಗೊಳ್ಳುವ ಎಲ್ಲ ಚುನಾವಣ ಭಾಷಣದಲ್ಲಿ ಬಹಿರಂಗವಾಗಿ “ಬಜರಂಗದಳ ನಿಷೇಧಿಸುತ್ತೇವೆ’ ಎಂದು ಘೋಷಿಸಲಿ. ಇದರ ಪರಿಣಾಮ ಮೇ 13ರಂದು ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ನಿಷೇಧ ಪರಿಹಾರವಲ್ಲ: ಎಚ್‌ಡಿಕೆ
ಕೊಪ್ಪಳ: ಬಜರಂಗ ದಳವನ್ನು ನಿಷೇಧಿಸುವ ಕುರಿತು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದೆ. ವಾಸ್ತವವಾಗಿ ಇದು ಪ್ರಣಾಳಿಕೆಯ ವಿಷಯವೇ ಅಲ್ಲ. ಅಲ್ಲದೆ, ಬಜರಂಗ ದಳವನ್ನು ನಿಷೇಧಿಸುವುದು ಪರಿಹಾರವೂ ಅಲ್ಲ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಸುಮಧುರ ವಾತಾವರಣ ತರಬೇಕು. ಅದಕ್ಕೆ ಸಂಘಟನೆಯನ್ನು ನಿಷೇಧಿಸುವುದು ಪರಿಹಾರವಲ್ಲ. ಅಲ್ಲಿ ಯಾರು ತಪ್ಪು ಮಾಡಿದ್ದಾರೋ ಅದರ ಮೂಲವನ್ನು ಪತ್ತೆಹಚ್ಚಬೇಕು. ಬಜರಂಗ ದಳದಲ್ಲಿ ಅಮಾಯಕ ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಮಕ್ಕಳ ಮೆದುಳಿಗೆ ಭಾವನಾತ್ಮಕ ವಿಷಯಗಳನ್ನು ತುಂಬುತ್ತಾರೆ. ಅಂತಹ ಚಟುವಟಿಕೆಗಳನ್ನೆಲ್ಲ ಕಡಿಮೆ ಮಾಡಬೇಕು. ಹಿಂದೆ ಕಾಂಗ್ರೆಸ್‌ ಸರಕಾರ ಇದ್ದಾಗ ಯಾಕೆ ನಿಷೇಧ ಮಾಡಿಲ್ಲ? ಈಗ ಅವರು ಕೇವಲ ಅ ಧಿಕಾರಕ್ಕೆ ಏರಬೇಕು ಎಂಬ ಕಾರಣಕ್ಕಾಗಿ ಹೀಗೆಲ್ಲ ಮಾತನಾಡುತ್ತಿದ್ದಾರೆ ಎಂದರು.

ದೇಶದ ರಾಜಕಾರಣದಲ್ಲಿ ಯಾವ ಪಕ್ಷಕ್ಕೂ ತತ್ವ-ಸಿದ್ಧಾಂತವಿಲ್ಲ. ಸಿದ್ದರಾಮಯ್ಯ ಅವರು ನಮಗೆ ಗೆದ್ದೆತ್ತಿನ ಬಾಲ ಹಿಡಿಯುವವರು ಎನ್ನುತ್ತಾರೆ. ಅದಿರಲಿ, ಆದರೆ ಸೋತೆತ್ತಿನ ಬಾಲ ಹಿಡಿದು ಬರುತ್ತಿರುವ ನಿಮಗೆ ಏನನ್ನಬೇಕು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ರಾಜ್ಯದಲ್ಲಿ ನೆರೆ ಸಹಿತ ಹಲವು ಗಂಭೀರ ವಿಕೋಪಗಳಾಗಿದ್ದಾಗ ಮೋದಿ ಬರಲಿಲ್ಲ. ಈಗ ಪದೇಪದೆ ಬಂದು ರೋಡ್‌ ಶೋ ಮಾಡಿ, ಜನರಿಗೆ ಕೈ ಬೀಸಿ ಹೋಗುತ್ತಿದ್ದಾರೆ. ನಿಜವಾದ ಸಮಸ್ಯೆ ರೋಡ್‌ ಶೋದಲ್ಲಿ ಕಾಣುವುದಿಲ್ಲ ಎಂದರು.

ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್‌ 30-35 ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿಯಲ್ಲಿ ಬೊಮ್ಮಾಯಿ ಮುಖ ನೋಡಿ ಜನ ಮತ ಹಾಕುವುದಿಲ್ಲ. ಅದಕ್ಕೆ ಅವರಿಗೆ ಮೋದಿ ಬಿಟ್ಟು ಬೇರೆ ಯಾರೂ ಇಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ 10 ಸ್ಥಾನಗಳೂ ಸಿಗದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next