Advertisement

ಬಜರಂಗ ದಳ ತ್ರಿಶೂಲ ಪೂಜೆ :ಪರಿಶೀಲಿಸಲು ಪೊಲೀಸ್ ಆಯುಕ್ತರ ಸೂಚನೆ

03:24 PM Oct 15, 2021 | Team Udayavani |

ಮಂಗಳೂರು: ಆಯುಧ ಪೂಜೆ ಸಂದರ್ಭ ಬಜರಂಗ ದಳ ಕಾರ್ಯಕರ್ತರು ತ್ರಿಶೂಲಕ್ಕೆ ಪೂಜೆ ಸಲ್ಲಿಸಿ ಪ್ರದರ್ಶಿಸಿರುವ ಫೋಟೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಪರಿಶೀಲಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

Advertisement

ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ , ಮಂಗಳೂರು ಸೇರಿದಂತೆ  ಇತರ ಕಡೆಗಳಲ್ಲಿ ವಿಹಿಂಪ, ಬಜರಂಗ ದಳದ ವತಿಯಿಂದ ನಡೆದ ಆಯುಧ ಪೂಜೆ ಸಂದರ್ಭದಲ್ಲಿ ‘ತ್ರಿಶೂಲ ದೀಕ್ಷೆೆ’ ಮಾಡಿರುವುದು ಗೊತ್ತಾಗಿದೆ. ಪರಿಶೀಲಿಸಿದಾಗ ಪ್ರತೀ ವರ್ಷ ಇದನ್ನು ಆಚರಣೆ ರೀತಿಯಲ್ಲಿ ಮಾಡಿರುವುದು ಗೊತ್ತಾಗಿದೆ. ಇದರಲ್ಲಿ ಕಾನೂನಾತ್ಮಕವಾಗಿ ತಪ್ಪಿದೆಯೇ ಎಂದು ಪರಿಶೀಲಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು.

ಮಂಗಳೂರು, ಉಡುಪಿ, ಪುತ್ತೂರು ಸೇರಿದಂತೆ ವಿವಿಧೆಡೆ ಆಯುಧ ಪೂಜೆ ಸಂದರ್ಭದಲ್ಲಿ ಬಜರಂಗ ದಳ ಕಾರ್ಯಕರ್ತರು ತ್ರಿಶೂಲಗಳಿಗೆ ಪೂಜೆ ಸಲ್ಲಿಸಿ ಕೈಯಲ್ಲಿ ಹಿಡಿದಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next