Advertisement

HDK ದತ್ತಮಾಲಾ ಧಾರಣೆ:ವಿಎಚ್‌ಪಿ-ಭಜರಂಗ ದಳ ಸ್ವಾಗತ

10:00 PM Nov 20, 2023 | Team Udayavani |

ಚಿಕ್ಕಮಗಳೂರು: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅಗತ್ಯ ಬಿದ್ದರೆ ದತ್ತಮಾಲಾ ಧಾರಣೆ ಮಾಡುತ್ತೇನೆಂದು ನೀಡಿರುವ ಹೇಳಿಕೆಯನ್ನು ವಿಶ್ವಹಿಂದೂ ಪರಿಷತ್‌ ಮತ್ತು ಭಜರಂಗದಳದ ಮುಖಂಡರು, ಕಾರ್ಯಕರ್ತರು ಸ್ವಾಗತಿಸಿದ್ದಾರೆ.

Advertisement

ಎಚ್‌.ಡಿ.ಕುಮಾರಸ್ವಾಮಿ ಈ ಸಂಬಂಧ ಭಾನುವಾರ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಸ್ವಾಗತಿಸಿರುವ ವಿಶ್ವ ಹಿಂದೂ ಪರಿಷತ್‌ ಮತ್ತು ಭಜರಂಗದಳದ ಮುಖಂಡರು, ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಎಚ್‌.ಡಿ.ಕುಮಾರಸ್ವಾಮಿ ದತ್ತಮಾಲಾ ಧಾರಣೆ ಮಾಡಿದರೆ ಸ್ವಾಗತ. ದತ್ತಾತ್ರೇಯ ಸ್ವಾಮಿ ಅವರ ರಾಜಕೀಯ ಭವಿಷ್ಯವನ್ನೇ ಬದಲು ಮಾಡುತ್ತಾರೆಂದು ಪೋಸ್ಟ್‌ ಮಾಡಿದ್ದಾರೆ.

ಡಿ.17ರಿಂದ 26ರವರೆಗೆ 11 ದಿನಗಳ ಕಾಲ ದತ್ತಜಯಂತಿ ನಡೆಯಲಿದ್ದು, ಈ ವೇಳೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ದತ್ತಮಾಲೆ ಧರಿಸುವಂತೆ ವಿಶ್ವ ಹಿಂದೂ ಪರಿಷತ್‌ ಮತ್ತು ಭಜರಂಗದಳದ ಮುಖಂಡರು ಮತ್ತು ಕಾರ್ಯಕರ್ತರು ಖುದ್ದು ಆಹ್ವಾನಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next