Advertisement

ನಿಷೇಧಾಜ್ಞೆ ನಡುವೆ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

01:15 PM Aug 16, 2022 | Team Udayavani |

ಶಿವಮೊಗ್ಗ: ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಿದ್ದರೂ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

Advertisement

ಭದ್ರಾವತಿ ನೆಹರು ನಗರದಲ್ಲಿ ಡಿಚ್ಚಿ ಮುಬಾರಕ್‌ ಎಂಬಾತನಿಗೂ ಸುನೀಲ್ ಗೂ ಗಲಾಟೆ ನಡೆದಿದ್ದು, ಈ ವೇಳೆ ಸುನೀಲ್ ಮೇಲೆ ಹಲ್ಲೆ ನಡೆಸಲಾಗಿದೆ. ಚಾಕುವಿನಿಂದ ಇರಿಯಲು ಯತ್ನಿಸಲಾಗಿದೆ. ಆದರೆ, ಸುನೀಲ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಇಬ್ಬರ ನಡುವಿನ ಹಳೆಯ ವೈಮನಸ್ಯಕ್ಕೆ ನಡೆದಿದ್ದು ಎಂದು ಹೇಳಲಾಗಿದ್ದರೂ, ಸೂಕ್ಷ್ಮ ಸಮಯದ ವೇಳೆ ಇಂತಹ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಹಿಂದೂಗಳು ಎದ್ದರೆ ಮುಸಲ್ಮಾನ ಗೂಂಡಾಗಳು ಉಳಿಯಲ್ಲ: ಈಶ್ವರಪ್ಪ ಎಚ್ಚರಿಕೆ

ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

ಶಿವಮೊಗ್ಗದ ಘಟನೆ ಹಿನ್ನೆಲೆಯಲ್ಲಿ ನಗರದಲ್ಲೂ ಸಹ ನಿನ್ನೆಯಿಂದಲೇ ಸೆಕ್ಷನ್ ಜಾರಿಗೊಳಿಸಲಾಗಿದ್ದು, ನಗರದಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next