Advertisement
ಮಂಗಳೂರಿನ ಬಾವುಟಗುಡ್ಡೆಯ ಈದ್ಗಾದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹಬ್ಬದ ವಿಶೇಷ ಪ್ರಾರ್ಥನೆ ಹಾಗೂ ಖುತ್ಬಾ ಪ್ರವಚನ ನೀಡಿ ‘ಏಕದೇವ ವಿಶ್ವಾಸದ ಸಮಾಜ ಸ್ಥಾಪನೆಗಾಗಿ ಪ್ರವಾದಿ ಇಬ್ರಾಹಿಂ ಅವರು ಇಡೀ ಜೀವನವನ್ನೇ ಮುಡಿಪಾಗಿರಿಸಿ, ಹಲವಾರು ಸವಾಲು, ಸ್ವಪರೀಕ್ಷೆಗಳನ್ನು ಎದುರಿಸಿ, ತ್ಯಾಗ, ಬಲಿದಾನ ಮಾಡಿದ್ದರು. ಅವರ ಜೀವನ ಎಲ್ಲರಿಗೂ ಮಾದರಿಯಾಗಬೇಕು’ ಎಂದು ಹೇಳಿದರು.
Related Articles
ಉಡುಪಿಯ ಜಾಮಿಯಾ ಮಸೀದಿ ಸಹಿತ ಜಿಲ್ಲೆಯ ವಿವಿಧ ಮಸೀದಿಗಳಲ್ಲಿ ನಮಾಜ್ ನಡೆದ ಬಳಿಕ ಈದ್ ಸಂದೇಶವನ್ನು ಸಾರಲಾಯಿತು. ಮೂಳೂರು ಜಿಲ್ಲಾ ಮಸೀದಿಗೆ ಖಾಝಿ ಪಿ.ಎಂ. ಇಬ್ರಾಹಿಂ ಮುಸ್ಲಿಯಾರ್ ಅವರು ಮಂಗಳವಾರ ಸಂಜೆ ಭೇಟಿ ನೀಡಿದರು.
Advertisement
ಮುಸ್ಲಿಮರು ಬೆಳಗ್ಗೆ ಸಿಹಿ ತಿಂಡಿ ಸ್ವೀಕರಿಸಿ, ಹೊಸ ಉಡುಪು ಧರಿಸಿ ವಿಶೇಷ ಪ್ರಾರ್ಥನೆಗಾಗಿ ಮಸೀದಿ ಮತ್ತು ಈದ್ಗಾಕ್ಕೆ ತೆರಳಿದರು. ಧರ್ಮಗುರುಗಳ ಪ್ರಾರ್ಥನೆ, ಪ್ರವಚನ ನಡೆದ ಬಳಿಕ ಎಲ್ಲರೂ ಪರಸ್ಪರ ಹಸ್ತ ಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ಹಂಚಿಕೊಂಡರು. ಕೆಲವರು ಬಡವರಿಗೆ ದಾನ, ಧರ್ಮ ಮಾಡಿ ನೆರವಾದರು. ಮನೆಯವರು, ನೆರೆಹೊರೆಯವರು, ಗೆಳೆಯರು, ಸಂಬಂಧಿಕರು ಸೇರಿದಂತೆ ಪ್ರತಿಯೊಬ್ಬರೂ ಹಬ್ಬದ ಶುಭಾಶಯ ಹೇಳಿದರು.