Advertisement

ಕರಾವಳಿಯಲ್ಲಿ ಸರಳ ಬಕ್ರೀದ್‌ ಆಚರಣೆ; ಮಸೀದಿಗಳಲ್ಲಿ ಪ್ರಾರ್ಥನೆ

10:42 AM Jul 21, 2021 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸರಕಾರದ ಹೊಸ ಮಾರ್ಗಸೂಚಿಯಂತೆ  ಮುಸಲ್ಮಾನ ಬಾಂಧವರು ಸರಳವಾಗಿ ಬಕ್ರೀದ್‌ ಹಬ್ಬ ಆಚರಿಸಿದರು.

Advertisement

ಉಡುಪಿಯ ಹಾಶಿಮಿ ಮಸೀದಿಯಲ್ಲಿ ರಾಜ್ಯ ಆಡಳಿತ ಹೊರಡಿಸಿದ ಮಾರ್ಗಸೂಚಿಗಳೊಂದಿಗೆ ಈದ್ ಆಚರಿಸಲಾಯಿತು. ಬೆಳಿಗ್ಗೆ 7.30ಕ್ಕೆ ನಡೆದ ಸಾಮೂಹಿಕ ಪ್ರಾರ್ಥನೆ ನಂತರ ಮೌಲಾನಾ ಹಾಶಿಮ್ ಉಮ್ರಿ ಅವರ ಈದ್ ಅಲ್ ಅಧ್ಸ್‌ನ ( Eid Al Adha) ಮಹತ್ವವನ್ನು ಹೇಳಿದರು

ರಾಜ್ಯ ಮತ್ತು ಜಿಲ್ಲಾಡಳಿತದ ನಿರ್ದೇಶನದಂತೆ ಮುಸ್ಲಿಂ ಸಹೋದರರು ಸಾಮಾಜಿಕ ದೂರವನ್ನು ಕಾಪಾಡಿಕೊಂಡು ಮುಖವಾಡ ಧರಿಸಿ ಈದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಶಿರ್ವಸುನ್ನಿ ಜಾಮಿಯಾ ಮಸೀದಿಯಲ್ಲಿ ಸರಳ ಬಕ್ರೀದ್‌ ಆಚರಣೆ

ಕೋವಿಡ್‌ ಸೋಂಕು ಹಿನ್ನೆಲೆಯಲ್ಲಿ ಶಿರ್ವ ಸುನ್ನಿ ಜಾಮಿಯಾ ಮಸೀದಿಯಲ್ಲಿ ಸರಕಾರದ ಹೊಸ ಮಾರ್ಗಸೂಚಿಯಂತೆ ಸರಳವಾಗಿ ಬಕ್ರೀದ್‌ ಹಬ್ಬ ಆಚರಿಸುವ ಮೂಲಕ ಜಮಾತ್‌ನ ಸೀಮಿತ ಜನರಿಗೆ ನಮಾಜ್‌ ನೆರವೇರಿಸಲು ಅವಕಾಶ ಕಲ್ಪಿಸಿಕೊಡಲಾಗಿತ್ತು.

Advertisement

ಬೆಳಗ್ಗೆ ಜಾಮೀಯಾ ಮಸೀದಿ ಮತ್ತು ತೋಪನಂಗಡಿ ಮಸೀದಿಯಲ್ಲಿ ಮುಸಲ್ಮಾನ ಬಾಂಧವರು ಮಾಸ್ಕ್ ಧರಿಸಿ ಸಾಮೂಹಿಕ ಅಂತರ ಕಾಪಾಡಿಕೊಂಡು ನಮಾಜ್‌ ಸಲ್ಲಿಸಿದರು. ಕೊವಿಡ್‌ 19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಳ್ಳಲಾಗಿದ್ದು, ಕೈಕುಲುಕಿ, ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಳ್ಳಲು ನಿರ್ಬಂಧ ವಿಧಿಸಲಾಗಿತ್ತು.

ಶಿರ್ವ ಜಾಮೀಯಾ ಮಸೀದಿಯ ಆಡಳಿತ ಮಂಡಳಿಯ ವತಿಯಿಂದ ಮಕ್ಕಳು ಮತ್ತು ವೃದ್ಧರಿಗೆ ಮನೆಯಲ್ಲಿಯೇ ನಮಾಜ್‌ ಸಲ್ಲಿಸಲು ಸೂಚಿಸಲಾಗಿದ್ದು, ಪ್ರಾರ್ಥನೆ ಸಲ್ಲಿಸಿದ ಬಳಿಕ ಮನೆಮಂದಿಯೊಂದಿಗೆ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಕೊರೊನಾ ಮಹಾಮಾರಿಯಿಂದಾಗಿ ನೆರೆಹೊರೆಯವರೊಂದಿಗೂ ಶುಭಾಶಯ ವಿನಿಮಯ ಮಾಡಿಕೊಳ್ಳಲು ಆತಂಕದ ಪರಿಸ್ಥಿತಿ ಇದೆ. ಬಕ್ರೀದ್‌ ಹಬ್ಬದ ಪ್ರಾರ್ಥನೆಯೊಂದಿಗೆ ಕೊರೊನಾ ಭೀತಿ ದೂರವಾಗಿ ಸಮಾಜದಲ್ಲಿ  ನೆಮ್ಮದಿಯ ಜನಜೀವನ ನೆಲೆಗೊಳ್ಳಲಿ ಎಂದು ಶಿರ್ವಸುನ್ನಿ ಜಾಮೀಯಾ ಮಸೀದಿಯ ಖತೀಬರಾದ ಸಿರಾಜುದ್ದೀನ್‌ ಝೈನಿ, ಮಸೀದಿ ಆಡಳಿತ ಮಂಡಳಿಯ ಅಧ್ಯಕ್ಷ ಹುಸೇನ್‌ ಅಬ್ದುಲ್‌ ಕಲಂದರ್‌ ಮತ್ತು  ಶಿರ್ವ ಗ್ರಾ.ಪಂ. ಮಾಜಿ ಅಧ್ಯಕ್ಷ ಹಸನಬ್ಬ ಶೇಕ್‌ ಆಶಯ ವ್ಯಕ್ತಪಡಿಸಿದ್ದಾರೆ.

ಕಾಪು ತಾಲೂಕಿನಾದ್ಯಂತ ಸಂಭ್ರಮದ ಬಕ್ರೀದ್ ಆಚರಣೆ

ಕಾಪು ತಾಲೂಕಿನಾದ್ಯಾಂತ ಬುಧವಾರ ಸಂಭ್ರಮ, ಸಡಗರ ಮತ್ತು ಸರಳತೆಯೊಂದಿಗೆ ಮುಸ್ಲಿಂ ಭಾಂಧವರು ಬಕ್ರೀದ್ ಹಬ್ಬವನ್ನು ಆಚರಿಸಿದರು. ಕಾಪು ತಾಲೂಕಿನ ಕಾಪು, ಮೂಳೂರು, ಉಚ್ಚಿಲ, ಎರ್ಮಾಳು, ಪಡುಬಿದ್ರಿ, ಮಜೂರು, ಶಿರ್ವ ಸಹಿತವಾಗಿ ಹೆಚ್ಚಿನ ಕಡೆಗಳಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಮಸೀದಿಗಳಲ್ಲಿ ನಮಾಜ್ ನಡೆಯಿತು.

ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚಿನ ಕಡೆಗಳಲ್ಲಿ ಜಮಾತ್ ವ್ಯಾಪ್ತಿಯಲ್ಲಿ ಮುಂಜಾನೆ ಬೇಗನೆ ನಿಯಮಿತ ಸದಸ್ಯರ ಪಾಲ್ಗೊಳ್ಳುವಿಕೆಯೊಂದಿಗೆ ಸಾಮೂಹಿಕ ನಮಾಜ್ ನಡೆಸಲಾಯಿತು.

ಕಾಪು, ಶಿರ್ವ ಮತ್ತು ಪಡುಬಿದ್ರಿ ಪೊಲೀಸರು ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.

ಪುತ್ತೂರು: ಬಕ್ರೀದ್ ಆಚರಣೆಯ ಪ್ರಯುಕ್ತ ಬುಧವಾರ ಪುತ್ತೂರು ಕೇಂದ್ರ ಜುಮ್ಮಾ ಮಸೀದಿಯಲ್ಲಿ ಮುಸ್ಲಿಂ ಬಾಂಧವರಿಂದ ವಿಶೇಷ ಪ್ರಾರ್ಥನೆ ನೆರವೇರಿತು.

Advertisement

Udayavani is now on Telegram. Click here to join our channel and stay updated with the latest news.

Next