Advertisement

ಸಿ ಡಿ ಪ್ರಕರಣ :ಸಿಎಂ ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ‌

01:46 AM Mar 20, 2021 | Team Udayavani |

ಬೆಂಗಳೂರು: ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಅವರ  ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ‌ ಮಾಡಿ ಚರ್ಚೆ ನಡೆಸಿದ್ದಾರೆ.

Advertisement

ಸಿಡಿ ವಿಷಯ ಕುರಿತಂತೆ ಹೈ ಕಮಾಂಡ್ ಗೆ ಮಾಹಿತಿ ನೀಡಲು ದೆಹಲಿಗೆ ತೆರಳಿದ್ದ ಬಾಲಚಂದ್ರ ಜಾರಕಿಹೊಳಿ‌ ಬೆಂಗಳೂರಿಗೆ ವಾಪಸ್ ಆಗಿದ್ದು, ಹೈಕಮಾಂಡ್ ನಾಯಕರ ಜೊತೆಗಿನ ಮಾತುಕತೆಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ. ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗಾವಿ ಲೋಕಸಭಾ ಉಪ ಚುನಾವಣೆ ಘೋಷಣೆಯಾಗಿರುವುದರಿಂದ ಜಿಲ್ಲೆಯ ಉಸ್ತುವಾರಿ ನೋಡಿಕೊಳ್ಳಲು ಜಾರಕಿಹೊಳಿ ಕುಟುಂಬಕ್ಕೆ ಸಚಿವ ಸ್ಥಾನ ನೀಡಬೇಕೆಂಬ ಒತ್ತಡ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಬಗ್ಗೆಯೂ ಸಿಎಂ ಜೊತೆ ಬಾಲಚಂದ್ರ.ಜಾರಕಿಹೊಳಿ ಚರ್ಚೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಉಪ ಚುನಾವಣೆ ಅಭ್ಯರ್ಥಿಗಳ ಕುರಿತು ನಾಳೆ ಚರ್ಚೆ : ಅರುಣ್ ಸಿಂಗ್

ಅವರು ಸಿಎಂ ಭೇಟಿ ಮಾಡಿದ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಜರಿದ್ದರು ಎಂದು ತಿಳಿದು ಬಂದಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next