Advertisement

ದೆಹಲಿಯಲ್ಲಿ ರಮೇಶ ಜತೆ ಬಾಲಚಂದ್ರ ಠಿಕಾಣಿ ?

12:40 AM Dec 30, 2018 | Team Udayavani |

ಬೆಳಗಾವಿ: ರಮೇಶ ಜಾರಕಿಹೊಳಿ ಕಳೆದ ನಾಲ್ಕು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೆ ಅಜ್ಞಾತ ಸ್ಥಳದಲ್ಲಿರುವ ಬೆನ್ನಲ್ಲೇ ಅವರ ಸಹೋದರ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ ಎನ್ನಲಾಗಿದ್ದು ಇದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಬಲ್ಲ ಮೂಲಗಳ ಪ್ರಕಾರ ಬಾಲಚಂದ್ರ ಜಾರಕಿಹೊಳಿ 2 ದಿನಗಳಿಂದ ದೆಹಲಿಯಲ್ಲಿ ತಂಗಿದ್ದಾರೆ. 

Advertisement

ಜಾರಕಿಹೊಳಿ ಅವರೊಂದಿಗೆ ರಮೇಶ ಜಾರಕಿಹೊಳಿ ಅವರ ಪುತ್ರ ಸಹ ತೆರಳಿದ್ದಾರೆ.  ಮೂಲದ ಪ್ರಕಾರ ರಮೇಶ ಪರ ಬಿಜೆಪಿ ಇಲ್ಲವೇ ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡಿ ಅವರ ಮನವೊಲಿಸುವ ಕಾರ್ಯಕ್ಕೆ ಬಾಲಚಂದ್ರ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
 

Advertisement

Udayavani is now on Telegram. Click here to join our channel and stay updated with the latest news.

Next