Advertisement

Kunigal: ಪೋಕ್ಸೊ ಪ್ರಕರಣದಡಿ ಬಾಲ‌ಮಂಜುನಾಥ ಸ್ವಾಮೀಜಿ ಬಂಧನ

07:36 AM Mar 08, 2024 | Team Udayavani |

ಕುಣಿಗಲ್: ತಾಲೂಕಿನ ಹುಲಿಯೂರುದುರ್ಗದ ಹಂಗರಹಳ್ಳಿ ಶ್ರೀ ವಿದ್ಯಾಚೌಡೇಶ್ವರಿ ಮಹಾ ಸಂಸ್ಥಾನ ಮಠದ ಬಾಲ ಮಂಜುನಾಥ ಸ್ವಾಮೀಜಿ ಅವರನ್ನು ಮಾ.7ರ ಗುರುವಾರ ತಡರಾತ್ರಿ ಪೊಲೀಸರು ಪೋಕ್ಸೊ ಕಾಯ್ದೆ ಅಡಿ ಬಂಧಿಸಿದ್ದಾರೆ.

Advertisement

ಚರ್ಮರೋಗ ಚಿಕಿತ್ಸೆ ಕೊಡುವ ನೆಪದಲ್ಲಿ ಬೆತ್ತಲೆ ವಿಡಿಯೋ ಮಾಡಿ ತನ್ನನ್ನು ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ಆರು ಮಂದಿ ವಿರುದ್ದ ದೂರು ದಾಖಲಿಸಿದ್ದ ಸ್ವಾಮೀಜಿ ಈಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಚರ್ಮ ರೋಗಕ್ಕೆ ಚಿಕಿತ್ಸೆ ಕೊಡುವ ನೆಪದಲ್ಲಿ ಮಠದ ಬಾಲ ಮಂಜುನಾಥ ಸ್ವಾಮೀಜಿ ಬೆತ್ತಲೆ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್ ಮಾಡಿರುವುದಾಗಿ ಸ್ವಾಮೀಜಿ ಸೇವಕ ಅಭಿಷೇಕ್ ಆತನ ಸಂಬಂದಿ ಯುವತಿ ಸೇರಿ ಆರು ಮಂದಿ ವಿರುದ್ದ ಬ್ಲಾಕ್ ಮೇಲ್ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತನಿಖೆ ಆರಂಭಿಸಿದ ಪೊಲೀಸರಿಗೆ ಅಸಲಿ ಸತ್ಯ ತಿಳಿದು ಬಂದಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬ್ಲಾಕ್ ಮೇಲ್ ತನಿಖೆ ಜಾಡು ಹಿಡಿದ ಪೊಲೀಸರು ಗುರುವಾರ ಸಂಜೆಯಿಂದಲೇ ಮಠದಲ್ಲಿ ತನಿಖೆ ಕೈಗೊಂಡು ರಾತ್ರಿ 11.30 ರವರೆಗೆ ಮುಂದುವರೆದಿದ್ದರು, ಈ ವೇಳೆ ಅಭಿಷೇಕ್ ಕೊಟ್ಟ ಮಾಹಿತಿ ಆಧರಿಸಿ ಸ್ವಾಮೀಜಿ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಸತ್ಯ ತಿಳಿದು ಬಂದಿದೆ ಎನ್ನಲಾಗಿದ್ದು, ಎಸ್ಪಿ ಕೆ.ವಿ ಅಶೋಕ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮೂರು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿ ಬಳಿಕ ಸ್ವಾಮೀಜಿಯನ್ನು ಬಂಧಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next