Advertisement

ದಸರಾ ಅಂಬಾರಿ ಹೊತ್ತಿದ್ದ ಬಲರಾಮ ಆನೆಗೆ ಗುಂಡು ;ಜಮೀನಿನ ಮಾಲಕನ ಬಂಧನ

10:15 PM Dec 16, 2022 | Team Udayavani |

ಮೈಸೂರು: ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಹೆಗ್ಗಳಿಕೆಯ ‘ಬಲರಾಮ’ ಆನೆಗೆ ಗುರುವಾರ ರಾತ್ರಿ ಜಮೀನಿನ ಮಾಲಕ ಸುರೇಶ್ ಎಂಬಾತ ಗುಂಡು ಹಾರಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಆತನನ್ನು ವಶಕ್ಕೆ ಪಡೆದಿದ್ದಾರೆ.

Advertisement

ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಬಲರಾಮ ಹೋಗಿದ್ದು, ಸಿಟ್ಟಿಗೆದ್ದ ಮಾಲೀಕ ಸುರೇಶ್ ಗುಂಡು ಹಾರಿಸಿದ್ದ. ಆನೆಯ ತೊಡೆ ಬಳಿ ಗುಂಡು ಹೊಕ್ಕಿತ್ತು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಶುವೈದ್ಯಾಧಿಕಾರಿ ಡಾ.ರಮೇಶ್ ಚಿಕಿತ್ಸೆ ನೀಡಿದ್ದು,ಚೇತರಿಸಿಕೊಳ್ಳುತ್ತಿದೆ.

ಕೃತ್ಯ ಎಸಗಿದ್ದ ಆರೋಪದ ಮೇರೆಗೆ ಆರೋಪಿಯನ್ನು ಬಂಧಿಸಿ ಒಂಟಿ ನಳಿಕೆಯ ಕೋವಿ ಹಾಗೂ ಕಾಡತೂಸುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next