Advertisement

ಶ್ರೀಮದ್‌ ರಂಭಾಪುರಿ ಪೀಠದಲ್ಲಿ ವೀರಭದ್ರಸ್ವಾಮಿ ರಥೋತ್ಸವ

11:33 AM Mar 08, 2020 | Naveen |

ಬಾಳೆಹೊನ್ನೂರು: ಪಂಚಪೀಠಗಳಲ್ಲಿ ಒಂದಾದ ಶ್ರೀಮದ್‌ ರಂಭಾಪುರಿ ಪೀಠದಲ್ಲಿ ಶ್ರೀ ಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಶನಿವಾರ ಸಂಭ್ರಮದಿಂದ ನೆರವೇರಿತು.

Advertisement

ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವಕ್ಕೆ ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನರೇಣುಕ ರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು, ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು, ಮಾನಿಹಳ್ಳಿ ಪುರವರ್ಗ ಮಠದ ಮಳೆಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಉತ್ಸಾಹದಿಂದ ಮಹಾರಥೋತ್ಸವದಲ್ಲಿ ಪಾಲ್ಗೊಂಡು ಶ್ರೀ ಸ್ವಾಮಿಯ ಮಹಾರಥಕ್ಕೆ ಪೂಜೆ ಸಲ್ಲಿಸಿದರು.

ಇದಕ್ಕೂ ಮೊದಲು ನಡೆದ ಶ್ರೀ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಾರಂಭವನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಂಭಾಪುರಿ ಪೀಠದ ಅತ್ಯುನ್ನತ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿಯನ್ನು ಮಾನವ ಕಂಪ್ಯೂಟರ್‌ ರಾಷ್ಟ್ರ ಪ್ರಶಸ್ತಿ ವಿಭೂಷಿತ ಮಾಸ್ಟರ್‌ ಬಸವರಾಜ ಶಂಕರ ಉಮರಾಣಿ (ಅಥಣಿ) ಅವರಿಗೆ ನೀಡಿ ಶ್ರೀ ರಂಭಾಪುರಿ ಜಗದ್ಗುರುಗಳು ಆಶೀರ್ವದಿಸಿದರು.

ಕೇಂದ್ರ ರೈಲ್ವೆ ಸಚಿವ ಸುರೇಶ ಅಂಗಡಿ, ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಸುರೇಶ್‌ ಮುಂತಾದವರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next