Advertisement

ಪಡಿತರ ವಿತರಣೆಯಲ್ಲಿ ಸಾಮಾಜಿಕ ಅಂತರ ಮರೆ

05:42 PM May 18, 2020 | Naveen |

ಬಾಳೆಹೊನ್ನೂರು: ಅರಣ್ಯ ಇಲಾಖೆ ಮುಂಭಾಗದ ವ್ಯವಾಸಾಯ ಉತ್ಪಾನಾ ಕೃಷಿ ಮಾರುಕಟ್ಟೆ ಬಾಳೆಹೊನ್ನೂರು ಬ್ರಾಂಚಿನಲ್ಲಿ ಪಡಿತರ ಅಕ್ಕಿ ವಿತರಿಸುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಎಲ್ಲರೂ ಕೋವಿಡ್ ಬಗ್ಗೆ ಕಾಳಜಿ ವಹಿಸಬೇಕಿದ್ದು ಲಾಕ್‌ಡೌನ್‌ ನಿಯಮ ಉಲ್ಲಂಘನೆ ಮಾಡಿ ಸಮಸ್ಯೆ ಉಂಟುಮಾಡುವುದು ಸರಿಯಲ್ಲ. ಎಲ್ಲದಕ್ಕೂ ಆರೋಗ್ಯ ಹಾಗೂ ಪೊಲೀಸ್‌ ಅಧಿಕಾರಿಗಳು ಎಚ್ಚರಿಕೆ ನೀಡುವಂತಾಗಿದೆ ಎಂದು ನಾಗರಿಕ ವೇದಿಕೆ ಆರೋಪಿಸಿದೆ.

Advertisement

ಸಂತೆ ಮಾರುಕಟ್ಟೆಯಲ್ಲಿ ಗೊಂದಲ: ನ.ರಾ.ಪುರ ರಸ್ತೆಯ ಮೀನು ಮಾರುಕಟ್ಟೆ ಬಳಿ ಪರ ಊರಿನಿಂದ ಬಂದ ಸಂತೆ ವ್ಯಾಪಾರಿಗಳು ವ್ಯಾಪಾರ ಮಾಡಲು ಪ್ರಾರಂಭಿಸಿದ್ದರು, ಮಾಹಿತಿ ತಿಳಿದ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ತೆರಳಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿ ತೆರವುಗೊಳಿಸಿದ್ದರು. ಸ್ವಲ್ಪ ಹೊತ್ತಿನ ನಂತರ ಆ ಭಾಗದ ಸದಸ್ಯಯೊìವರು ಸಂತೆ ವ್ಯಾಪಾರ ಮಾಡುವಂತೆ ತಿಳಿಸಿದರು ಎನ್ನಲಾಗಿದ್ದು, ಪುನಃ ವ್ಯಾಪಾರಿಗಳು ವ್ಯಾಪಾರ ಮಾಡಲು ಪ್ರಾರಂಭಿಸಿದರು ಮಾಹಿತಿ ತಿಳಿದ ಎ.ಎಸ್‌.ಐ ರವಿಕುಮಾರ್‌ ಹಾಗೂ ಸಿಬ್ಬಂದಿ ಸ್ಥಳಕ್ಕೆ ಪುನಃ ತೆರಳಿ ವ್ಯಾಪಾರಸ್ಥರನ್ನು ತೆರಳುವಂತೆ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next