Advertisement

ಭಾಲ್ಕಿ: ವಿದ್ಯಾರ್ಥಿಗಳ ಸುರಕ್ಷತೆಗೆ ಪ್ರಥಮಾದ್ಯತೆ

03:53 PM Jun 26, 2020 | Naveen |

ಭಾಲ್ಕಿ: ಕೋವಿಡ್ ಆತಂಕದ ಮಧ್ಯೆ ಗುರುವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮುಂಜಾಗ್ರತಾ ಕ್ರಮಗಳ ಪಾಲನೆಯೊಂದಿಗೆ ವಿದ್ಯಾರ್ಥಿಗಳ ಸುರಕ್ಷತೆಗೆ ಪ್ರಥಮಾದ್ಯತೆ ನೀಡಿದ್ದು ಕಂಡುಬಂತು. ಸುಸೂತ್ರವಾಗಿ ಪರೀಕ್ಷೆ ನಡೆಯಲು ಶಿಕ್ಷಣ, ಆರೋಗ್ಯ, ಪೊಲೀಸ್‌ ಇಲಾಖೆ ಸಿಬ್ಬಂದಿ ಶ್ರಮಿಸಿದರು.

Advertisement

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳನ್ನು ಸಾಮಾಜಿಕ ಅಂತರ ಪಾಲನೆಯೊಂದಿಗೆ ಸರದಿಯಲ್ಲಿ ನಿಲ್ಲಿಸಿ ಥರ್ಮಲ್‌ ಸ್ಕ್ರೀನಿಂಗ್‌ ಮಾಡಿ, ಕೈಗಳಿಗೆ ಸ್ಯಾನಿಟೈಜ್‌ಮಾಡಿ, ಮಾಸ್ಕ್ ವಿತರಿಸಿ ಪರೀಕ್ಷಾ ಕೇಂದ್ರದೊಳಗೆ ಬಿಡಲಾಯಿತು. ಕೆಲ ಮಕ್ಕಳು ಮಾಸ್ಕ್ ಧರಿಸಿಯೇ ಪರೀಕ್ಷೆಗೆ ಆಗಮಿಸಿದ್ದರು. ಪರೀಕ್ಷಾ ಕೇಂದ್ರದ ಸುತ್ತ ಯಾರೂ ಸುಳಿಯದಂತೆ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು. ಡಿವೈಎಸ್ಪಿ ಡಾ| ದೇವರಾಜ ಬಿ. ಪರೀಕ್ಷೆಗೂ ಮುನ್ನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.

ಶಿಕ್ಷಣ ಇಲಾಖೆ ಸಾಮಾಜಿಕ ಅಂತರ ಪಾಲನೆ ಮತ್ತು ಎಸ್‌ಒಪಿ ನಿಯಮ ಪಾಲನೆ ಕುರಿತು ಬ್ಯಾನರ್‌ ಕಟ್ಟಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿತು. ಪರೀಕ್ಷೆ ಮುಗಿದ ನಂತರ ಮನೆಗೆ ತೆರಳುವ ವಿದ್ಯಾರ್ಥಿಗಳಿಗೆ ಶಾಸಕ ಈಶ್ವರ ಖಂಡ್ರೆ ಕೊಡಮಾಡಿದ್ದ ಪಾರ್ಲೆ-ಜಿ ಬಿಸ್ಕಿಟ್‌ ಪೊಟ್ಟಣಗಳನ್ನು ವಿತರಿಸಲಾಯಿತು. ತಾಲೂಕಿನ ಒಟ್ಟು 15 ಕೇಂದ್ರಗಳಲ್ಲಿ ದ್ವಿತೀಯ ಭಾಷೆ ಇಂಗ್ಲಿಷ್‌ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 3835 ವಿದ್ಯಾರ್ಥಿಗಳಲ್ಲಿ 225 ವಿದ್ಯಾರ್ಥಿಗಳು ಗೈರಾಗಿದ್ದರು. 3610 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

Advertisement

Udayavani is now on Telegram. Click here to join our channel and stay updated with the latest news.

Next