Advertisement

ನುಡಿಹಬ್ಬಕ್ಕೆ ಶ್ರೀಗಳಿಗೆ ಆಹ್ವಾನ

04:25 PM Jun 26, 2019 | Team Udayavani |

ಭಾಲ್ಕಿ: ಪಟ್ಟಣದಲ್ಲಿ ಜೂ.28ರಂದು ನಡೆಯಲಿರುವ ಐದನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಡಾ| ಬಸವಲಿಂಗ ಪಟ್ಟದ್ದೇವರು ಹಾಗೂ ಶ್ರೀ ಗುರುಬಸವ ಪಟ್ಟದ್ದೇವರು ಅವರನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಆಹ್ವಾನಿಸಲಾಯಿತು.

Advertisement

ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಶಶಿಧರ ಕೋಸಂಬೆ ನೇತೃತ್ವದಲ್ಲಿ ಹಿರಿಯ ಸಾಹಿತಿಗಳು, ಪ್ರಮುಖರು, ಪದಾಧಿಕಾರಿಗಳು, ಕನ್ನಡ ಪ್ರೇಮಿಗಳು ಆಗಮಿಸಿ ಸಮ್ಮೇಳನದ ಸಾನ್ನಿಧ್ಯ ವಹಿಸಲಿರುವ ಡಾ| ಬಸವಲಿಂಗ ಪಟ್ಟದ್ದೇವರು ಹಾಗೂ ಶ್ರೀ ಗುರುಬಸವ ಪಟ್ಟದ್ದೇವರು ಅವರಿಗೆ ಶಾಲು ಹೊದಿಸಿ, ಹಾರ ಹಾಕಿ, ತಾಂಬೂಲ ನೀಡಿ ಆಹ್ವಾನಿಸಿದರು. ಹಿರಿಯ ಸಾಹಿತಿಗಳಾದ ಶರಣಯ್ಯ ಮಠಪತಿ, ವೀರಶೆಟ್ಟಿ ಬಾವುಗೆ, ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಶಂಭುಲಿಂಗ ಕಾಮಣ್ಣ, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಸುಭಾಷ ಹುಲಸೂರೆ, ಪ್ರಾಚಾರ್ಯ ಚಂದ್ರಕಾಂತ ಬಿರಾದಾರ್‌, ಕಸಾಪ ಗೌರವ ಕಾರ್ಯದರ್ಶಿ ರಮೇಶ ಚಿದ್ರಿ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಹಣಮಂತ ಕಾರಾಮುಂಗೆ, ಕಾಶೀನಾಥ ಲದ್ದೆ, ವಕೀಲ ಮಹೇಶ ರಾಚೋಟೆ, ಮಹಾಂತೇಶ ಭಂಡೆ, ಗಿರೀಶ್‌ ಬಿರಾದಾರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next