Advertisement

ಈಶ್ವರಪ್ಪ ಹೇಳಿಕೆಗೆ ಕೈ ಕಾರ್ಯಕರ್ತರ ಆಕ್ರೋಶ

03:06 PM Feb 22, 2022 | Team Udayavani |

ಬಳ್ಳಾರಿ: ಕೆಂಪುಕೋಟೆ ಮೇಲೆ ಕೇಸರಿ ಬಾವುಟಹಾರಿಸುವುದಾಗಿ ಹೇಳಿರುವ ಸಚಿವ ಈಶ್ವರಪ್ಪ ವಿರುದ್ಧದೇಶದ್ರೋಹಿ ಪ್ರಕರಣ ದಾಖಲಿಸಬೇಕು ಎಂದುಆಗ್ರಹಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದಿಂದ ನಗರದಲ್ಲಿಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿತು.

Advertisement

ನಗರದ ಗಡಿಗಿ ಚನ್ನಪ್ಪ ವೃತ್ತದಿಂದ ಪ್ರತಿಭಟನಾಮೆರವಣಿಗೆ ನಡೆಸಿದ ಪ್ರತಿಭಟನಾನಿರತರು, ರಾಜ್ಯಸರ್ಕಾರ, ಸಚಿವ ಈಶ್ವರಪ್ಪ ವಿರುದ್ಧ ವಿವಿಧ ಘೋಷಣೆಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಜಿಲ್ಲಾ ಧಿಕಾರಿಕಚೇರಿಗೆ ತಲುಪಿದ ಪ್ರತಿಭಟನಾಕಾರರು, ಕೆಲಕಾಲಪ್ರತಿಭಟನೆ ನಡೆಸಿದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರಾಜ್ಯಸಭಾ ಸದಸ್ಯ ಡಾ| ಸೈಯದ್‌ ನಾಸೀರ್‌ಹುಸೇನ್‌ ಅವರು, ದೇಶದ್ರೋಹಿ ಹೇಳಿಕೆ ನೀಡಿರುವಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ವಿರುದ್ಧಕಾಂಗ್ರೆಸ್‌ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.

ಇವರ ವಿರುದ್ಧ ಈಗಾಗಲೇ ಬೆಂಗಳೂರಿನಲ್ಲಿ ಮಾಜಿಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿವಿಧಾನಸೌಧದಲ್ಲಿ ಅಹೋರಾತ್ರಿ ಧರಣಿನಡೆಸಲಾಗುತ್ತಿದೆ. ಈಶ್ವರಪ್ಪ ಇಂಥ ಹೇಳಿಕೆ ಈಹಿಂದೆಯೂ ನೀಡಿದ್ದಾರೆ. ಈಶ್ವರಪ್ಪ ಹಿಜಾಬ್‌ವಿವಾದದ ಕುರಿತು ಹೇಳಿಕೆ ನೀಡುವ ಭರದಲ್ಲಿ ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ.

ಶಿವಮೊಗ್ಗದಲ್ಲಿ ರಾಷ್ಟ್ರ ಧ್ವಜಸ್ತಂಭಕ್ಕೆ ಕೇಸರಿ ಬಾವುಟಹಾರಿಸಿದ್ದಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. ಇದುದೇಶ ದ್ರೋಹದ ಕೆಲಸ. ಹಾಗಾಗಿ ಇವರ ವಿರುದ್ಧದೇಶದ್ರೋಹದ ಪ್ರಕರಣ ದಾಖಲಿಸಬೇಕು.ಇವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದುಆಗ್ರಹಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next