Advertisement

ಬಳ್ಳಾರಿ: ಬುಡಾ ಆಯುಕ್ತ ವರ್ಗಾವಣೆ: ನೂತನ ಆಯುಕ್ತರಾಗಿ ವೀರೇಂದ್ರ ನಿಯೋಜನೆ

11:26 PM Nov 26, 2020 | mahesh |

ಬಳ್ಳಾರಿ: ಇಲ್ಲಿನ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ಹಾವೇರಿಗೆ ಹಾಗೂ ಹಾವೇರಿಯ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವೀರೇಂದ್ರ ಅವರನ್ನು ಬಳ್ಳಾರಿ ಬುಡಾ ನೂತನ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಿ.ಎಸ್.ಶಿವಕುಮಾರ್ ಸ್ವಾಮಿ ಗುರುವಾರ ಆದೇಶ ಹೊರಡಿಸಿದ್ದಾರೆ.

Advertisement

ಬಳ್ಳಾರಿ ಬುಡಾ ಆಯುಕ್ತ ಈರಪ್ಪ ಬಿರಾದಾರ್ ಅವರನ್ನು ವರ್ಗಾವಣೆ ಮಾಡಿ ಹಾವೇರಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಕುಂದಗೋಳ ಪೌರಾಯುಕ್ತ ಶ್ರೇಣಿ -1 ಕೆ.ಎಂ.ಎ.ಎಸ್ ಅಧಿಕಾರಿ ವೀರೇಂದ್ರ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಿಯೋಜಿಸಲಾಗಿದೆ.

ಅದೇ ರೀತಿ ಬಳ್ಳಾರಿ ಬುಡಾ ಆಯುಕ್ತ ಈರಪ್ಪ ಬಿರಾದಾರ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಜಾಗಕ್ಕೆ ನೂತನ ಆಯುಕ್ತರನ್ನಾಗಿ ಹಾವೇರಿಯ ವೀರೇಂದ್ರ ಅವರನ್ನು ನಿಯೋಜಿಸಿ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ನಿಯೋಜಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next