Advertisement

ಅಪಘಾತ ತಡೆಗೆ ಎಲ್ಲರೂ ಕೈಜೋಡಿಸಿ

05:07 PM Feb 19, 2021 | |

ಬಳ್ಳಾರಿ: ಪ್ರತಿ ವರ್ಷ ಭಾರತದಲ್ಲಿ 1.5 ಲಕ್ಷ ಜನ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ರಾಜ್ಯದಲ್ಲಿ 10 ಸಾವಿರ ಜನ ಸಾವನ್ನಪ್ಪಿದ್ದಾರೆ. ಬಳ್ಳಾರಿಯಲ್ಲಿ 345 ಅಪಘಾತಗಳು ನಡೆದಿವೆ. 2019ರಲ್ಲಿ ಬಳ್ಳಾರಿಯಲ್ಲಿ 318 ಜನ ಸಾವನ್ನಪ್ಪಿದ್ದಾರೆ. ಅಪಘಾತಗಳನ್ನು ಪೂರ್ಣ ಪ್ರಮಾಣದಲ್ಲಿ ಕಡಿಮೆ ಮಾಡಲು ಆಗದಿದ್ದರೂ ಪ್ರಸಕ್ತ ವರ್ಷದಲ್ಲಿ ಶೇ.20ರಷ್ಟನ್ನಾದರೂ ಕಡಿಮೆ ಮಾಡಬೇಕು ಎಂಬ ಉದ್ದೇಶವನ್ನು ಇಟ್ಟುಕೊಳ್ಳಲಾಗಿದೆ ಎಂದು ಹೆಚ್ಚುವರಿ ಎಸ್‌ಪಿ ಬಿ.ಎನ್‌. ಲಾವಣ್ಯ ಹೇಳಿದರು.

Advertisement

ನಗರದ ಸೆಂಟಿನರಿ ಹಾಲ್‌ನಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ, ಸಂಚಾರಿ ಪೊಲೀಸ್‌ ಠಾಣೆ ಸಹಯೋಗದಲ್ಲಿ ನಡೆದ 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಿಕ ಸಮಾರೋಪದಲ್ಲಿ ಅವರು ಮಾತನಾಡಿದರು. ಸಾರ್ವಜನಿಕರ ಸಹಕಾರದಿಂದ ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವು ಯಶಸ್ವಿಯಾಗಿದೆ. ಜಿಲ್ಲೆಯಾದ್ಯಂತ ಸಂಚಾರಿ ಪೊಲೀಸರಿಂದ ಜನಕ್ಕೆ ಸಂಚಾರಿ ನಿಯಮದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಿದೆ. ಸಂಚಾರಿ ಪೊಲೀಸರು ಸಿಗ್ನಲ್‌ ಸರಿಯಾದ ರೀತಿಯಲ್ಲಿ ಫಾಲೋ ಮಾಡಿ, ತಪ್ಪದೇ ಯೂನಿಫಾರ್ಮ ಧರಿಸಿ, ಆಟೋ ಚಾಲಕರು ವೇಗವನ್ನು ಮೀರಿ ಆಟೋ ಚಲಾಯಿಸಬಾರದು ಎಂದು ಸೂಚಿಸಿದರು.

ಸಂಚಾರಿ ಠಾಣೆ ಸಿಪಿಐ ಎಂ.ನಾಗರಾಜ್‌ ಮಾತನಾಡಿ, ಜ. 18ರಿಂದ ಪ್ರಾರಂಭವಾದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ನಿಮಿತ್ತ ಒಂದು ತಿಂಗಳ ಅವಧಿಯಲ್ಲಿ 40 ಶಾಲಾ ಕಾಲೇಜುಗಳಲ್ಲಿ ಸಂಚಾರಿ ನಿಯಮದ ಬಗ್ಗೆ ಜಾಗೃತಿ ಮೂಡಿಸಲಾಗಿದೆ.
ಬೈಕ್‌ ಜಾಥಾ ಮೂಲಕ ಹೆಲ್ಮೆಟ್‌ ಕಡ್ಡಾಯವಾಗಿ ಬಳಸುವಂತೆ ಅರಿವು ಮೂಡಿಸಲಾಗಿದೆ. ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡರೆ ಅವರ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಇಂಥ ಘಟನೆಗಳನ್ನು ತಡೆಯುವ ಉದ್ದೇಶದಿಂದ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ. ಜಾಗೃತಿ ಮೂಡಿಸುವ ಕಾರ್ಯ ಇಲ್ಲಿಗೆ ನಿಲ್ಲದೆ ನಿರಂತರವಾಗಿ ಸಾಗುತ್ತದೆ ಎಂದರು.

ಸಂಚಾರಿ ಠಾಣೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿ ಕಾರಿ ಮತ್ತು ಸಿಬ್ಬಂದಿಗೆ ನೆನಪಿನ ಕಾಣಿಕೆಕೆ ನೀಡಲಾಯಿತು. ಈ
ಸಂದರ್ಭದಲ್ಲಿ ಡಿಸಿಆರ್‌ಬಿ ಡಿವೈಎಸ್ಪಿ ಮಹೇಶ್ವರ ಗೌಡ, ಮಹಿಳಾ ಠಾಣೆಯ ಸಿಪಿಐ ವಾಸುಕುಮಾರ್‌, ಕೌಲ್‌ಬಜಾರ್‌ ಠಾಣೆ ಸಿಪಿಐ ಸುಭಾಷ್‌ಚಂದ್ರ, ಆಟೋ ಸಂಘದ ಅಧ್ಯಕ್ಷ ತಾಯಪ್ಪ, ಆಟೋ ಚಾಲಕರು, ಪದಾಧಿಕಾರಿಗಳು, ಪೊಲೀಸ್‌ ಸಿಬ್ಬಂದಿ ಮತ್ತು ಇತರರು ಇದ್ದರು.

ಓದಿ : ಉದ್ಯಾವರ ಗ್ರಾಮ ಪಂಚಾಯತಿಗೆ ಬೀಗ ಜಡಿದು ಸಾರ್ವಜನಿಕರ ಆಕ್ರೋಶ

Advertisement
Advertisement

Udayavani is now on Telegram. Click here to join our channel and stay updated with the latest news.

Next