Advertisement

ಪ್ರವಾಸೋದ್ಯಮ ಸಚಿವರ ಭೇಟಿ-ಚರ್ಚೆ

06:47 PM Apr 01, 2021 | Team Udayavani |

ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಅಧಿಕಾರ ಅಧ್ಯಕ್ಷ ದಮ್ಮೂರು ಶೇಖರ್‌ ಅವರು ಪರಿಸರ, ಜೀವಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್‌ ಅವರನ್ನು ಮಂಗಳವಾರ ಭೇಟಿ ಮಾಡಿ ಬಳ್ಳಾರಿ ನಗರಾಭಿವೃದ್ಧಿ ಅಧಿಕಾರದಲ್ಲಿ ಬರುವ ಕೋಟೆ, ಸಂಗನಕಲ್ಲು ಗುಡ್ಡದ ಅಭಿವೃದ್ಧಿ ಕುರಿತು ಚರ್ಚಿಸಿದರು.

Advertisement

ಇದಕ್ಕೆ ಸ್ಪಂದಿಸಿದ ಸಚಿವರು ಶೀಘ್ರದಲ್ಲೇ ಬಳ್ಳಾರಿಗೆ ಭೇಟಿ ನೀಡಿ ಈ ಎರಡು ಪ್ರವಾಸಿ ತಾಣಗಳನ್ನು ವೀಕ್ಷಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಇದರ ಜೊತೆಗೆ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಇನ್ನೂ ಹೆಚ್ಚಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದ ಪ್ರಮುಖ 8 ಪ್ರವಾಸಿ ತಾಣಗಳಲ್ಲಿ ರೂಪ್‌ವೇ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಅದರಲ್ಲಿ ಬಳ್ಳಾರಿ ಕೋಟೆ ಪ್ರದೇಶ ಸೇರ್ಪಡೆಗೊಳಿಸಲು ಕ್ರಮವಹಿಸುವುದಾಗಿ ಸಚಿವ ಯೋಗೇಶ್ವರ ತಿಳಿಸಿದ್ದಾರೆ ಎಂದು ದಮ್ಮೂರು ಶೇಖರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next