Advertisement

ಕೋವಿಡ್‌ ಆದೇಶ ಕಟ್ಟು ನಿಟ್ಟಾಗಿ ಜಾರಿಗೊಳಿಸಿ

05:28 PM Apr 22, 2021 | Team Udayavani |

ಬಳ್ಳಾರಿ: ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಗಳನ್ನು ಅಧಿ  ಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾಧಿ ಕಾರಿ ಪವನಕುಮಾರ್‌ ಮಾಲಪಾಟಿ ಸೂಚಿಸಿದರು. ನಗರದ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ತಹಶೀಲ್ದಾರ್‌ರು, ಪೊಲೀಸ್‌ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿ ಅವರು ಸೂಚನೆಗಳನ್ನು ನೀಡಿದರು.

Advertisement

ರಾಜ್ಯಾದ್ಯಂತ ರಾತ್ರಿ 9ರಿಂದ ಬೆಳಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ವಿ ಧಿಸಿ ಸರ್ಕಾರ ಆದೇಶ ಹೊರಡಿಸಿದ್ದು ಇಂದಿನಿಂದ ಆರಂಭವಾಗಿ ಮೇ 4ರವರೆಗೆ ಜಾರಿಯಲ್ಲಿರಲಿದೆ. ಈ ಅವ ಧಿಯಲ್ಲಿ ವಾರಂತ್ಯದಲ್ಲಿ ಶನಿವಾರ ಮತ್ತು ಭಾನುವಾರದಂದು ಇಡೀ ದಿನ ಕರ್ಫ್ಯೂ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅದರಂತೆ ಈ ಸಂದರ್ಭದಲ್ಲಿ ಯಾವ್ಯಾವ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡಲಾಗಿದೆಯೋ ಅವುಗಳನ್ನು ಮಾತ್ರ ಷರತ್ತುಬದ್ಧ ಅನುಮತಿಯೊಂದಿಗೆ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದ ಡಿಸಿ ಮಾಲಪಾಟಿ ಅವರು ನೈಟ್‌ ಕರ್ಫ್ಯೂ ಸಂದರ್ಭದಲ್ಲಿ ರಾತ್ರಿ 8ಕ್ಕೆ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ್‌ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಅನಗತ್ಯ ಸಂಚಾರ ವ್ಯವಸ್ಥೆ ಬಂದ್‌ ಆಗುವಂತೆ ನೋಡಿಕೊಳ್ಳಬೇಕು ಎಂದರು.

ಹೋಟೆಲ್‌, ಬಾರ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಕೇವಲ ಪಾರ್ಸ್‌ಲ್‌ಗೆ ಮಾತ್ರ ಅವಕಾಶವಿದ್ದು, ಕುಳಿತುಕೊಂಡು ಸೇವಿಸಲು ಅವಕಾಶವಿರುವುದಿಲ್ಲ. ಇದಕ್ಕೆ ಅವಕಾಶ ಮಾಡಿಕೊಡಬಾರದು. ಕಟ್ಟಡ ಕಾರ್ಮಿಕ ಚಟುವಟಿಕೆಗಳಿಗೆ ವಿಕೆಂಡ್‌ ಕರ್ಫ್ಯೂ ಅವ  ಧಿಯಲ್ಲಿ ಹೊರತುಪಡಿಸಿ ಉಳಿದ ಸಮಯದಲ್ಲಿ ಕೆಲಸ ನಿರ್ವಹಿಸಲು ಸಮಸ್ಯೆ ಇರುವುದಿಲ್ಲ ಎಂದರು.

ಮದುವೆ 50 ಜನರಿಗೆ ಅವಕಾಶ: ಜಿಲ್ಲೆಯಲ್ಲಿರುವ ಎಲ್ಲ ಕಲ್ಯಾಣಮಂಟಪಗಳನ್ನು ಇಂದೇ ಬಂದ್‌ ಮಾಡಬೇಕು. ಕಲ್ಯಾಣ ಮಂಟಪಗಳ ಮಾಲೀಕರು ತಮ್ಮ ಹತ್ತಿರ ಬಂದ ಸಂದರ್ಭದಲ್ಲಿ ಇದುವರೆಗೆ ಮುಂಗಡ ಮದುವೆ ಬುಕ್‌ ಆಗಿರುವ ಮಾಹಿತಿಗಳನ್ನು ಪಡೆದುಕೊಂಡು ಅವುಗಳಿಗೆ ಪ್ರತಿ ಮದುವೆಗೆ 50 ಜನರು ಮೀರದಂತೆ ಭಾಗವಹಿಸಲು ಸೂಚಿಸಿ ಷರತ್ತುಬದ್ಧ ಅನುಮತಿ ಮತ್ತು ಪಾಸ್‌ಗಳನ್ನು ವಿತರಿಸಬೇಕು ಎಂದು ಜಿಲ್ಲಾ ಧಿಕಾರಿ ಮಾಲಪಾಟಿ ಖಡಕ್‌ ಸೂಚನೆ ನೀಡಿದರು.

ಹಳ್ಳಿಗಳಲ್ಲಿ ಟೆಂಟ್‌ ಹಾಕಿಕೊಂಡು ಮದುವೆ ಮಾಡಲಾಗುತ್ತದೆ. ಇವುಗಳ ಮಾಹಿತಿಯನ್ನು ಮುಂಚಿತವಾಗಿಯೇ ಗ್ರಾಮೀಣ ಮಟ್ಟದ ಅಧಿಕಾರಿಗಳಿಂದ ಪಡೆದುಕೊಂಡು ಅನುಮತಿ ಪಡೆದು ನಿಯಮಾನುಸಾರ ನಡೆಸಲು ತಿಳಿಸಬೇಕು. ವಿಕೆಂಡ್‌ ಕರ್ಫ್ಯೂ ಅವ ಧಿಯಲ್ಲಿಯೂ ಅಂದರೆ ಶನಿವಾರ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ವ್ಯಾಕ್ಸಿನೇಶನ್‌ ಮಾಡಬೇಕು (ನಗರ ಪ್ರದೇಶ ಹೊರತುಪಡಿಸಿ) ಎಂದರು.

Advertisement

ತೆರೆದ ಜಾಗದಲ್ಲಿ ಒಪನ್‌ ಮಾರುಕಟ್ಟೆ: ಕಳೆದ ಬಾರಿಯಂತೆ ಈ ಬಾರಿಯೂ ಮಾರುಕಟ್ಟೆಗಳಲ್ಲಿ ಜನಸಂದಣಿಯಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧೆಡೆ ತೆರೆದ ಜಾಗಗಳಲ್ಲಿ ಒಪನ್‌ ಮಾರುಕಟ್ಟೆಗಳನ್ನು ಆರಂಭಿಸಲು ಅಗತ್ಯ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಸೈದುಲು ಅಡಾವತ್‌ ಮಾತನಾಡಿ, ಬಳ್ಳಾರಿಯು ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಗಡಿರಾಜ್ಯವಾಗಿರುವುದರಿಂದ ಸಿರಗುಪ್ಪ ಮತ್ತು ಬಳ್ಳಾರಿ ತಾಲೂಕಿನ ಗಡಿ ಪ್ರದೇಶಗಳ ಬಳಿ ಈಗಾಗಲೇ ಚೆಕ್‌ಪೋಸ್ಟ್‌ ಆರಂಭಿಸಲಾಗಿದೆ. ಅಗತ್ಯ ಸೇವೆ ಸಂಚಾರ ಹೊರತುಪಡಿಸಿ ಅನಗತ್ಯ ಓಡಾಟಕ್ಕೆ ಬಂದವರನ್ನು ನಿಯಂತ್ರಿಸುವ ಕೆಲಸವಾಗಬೇಕು. ಯಾವುದೇ ರೀತಿಯ ದೂರಿಗೆ ಅಸ್ಪದ ನೀಡಬಾರದು ಎಂದು ಸೂಚನೆ ನೀಡಿದರು.

ಸರ್ಕಾರಿ ಸಿಬ್ಬಂದಿಗಳಲ್ಲಿ ಶೇ.50ರಷ್ಟು ಸಿಬ್ಬಂದಿಗಳನ್ನು ಕೋವಿಡ್‌ ಕರ್ತವ್ಯಕ್ಕಾಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದ್ದು, ಯಾರು ಕೂಡ ಈ ಕರ್ತವ್ಯಕ್ಕೆ ಬರುವುದಕ್ಕೆ ನಿರಾಕರಿಸುವಂತಿಲ್ಲ. ಮಾಸ್ಕ್ ಧರಿಸದವರಿಗೆ ದಂಡ ವಿ ಧಿಸುವ ಕಾರ್ಯಾಚರಣೆ ಮುಂದುವರಿಸಿ ಎಂದು ಸೂಚನೆ ನೀಡಿದ ಎಸ್ಪಿ ಸೈದುಲು ಅಡಾವತ್‌ ಅವರು ಸರ್ಕಾರ ಹೊರಡಿಸಿರುವ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಕೆಲಸ ತಾಲೂಕು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಇಂದಿನಿಂದಲೇ ಆರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಜಿಪಂ ಸಿಇಒ ಕೆ.ಆರ್‌.ನಂದಿನಿ, ಅಪರ ಜಿಲ್ಲಾ ಧಿಕಾರಿ ಪಿ.ಎಸ್‌.ಮಂಜುನಾಥ, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹೊÉàಟ್‌, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ ಸೇರಿದಂತೆ ಪೊಲೀಸ್‌ ಇಲಾಖೆ ಅಧಿ ಕಾರಿಗಳು ಹಾಗೂ ವಿವಿಧ ಇಲಾಖೆಗಳ ಅ ಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next