Advertisement

ಪಡಿತರ ಪಡೆಯಲು ಬಯೋಮೆಟ್ರಿಕ್‌ ಕಡ್ಡಾಯವಲ್ಲ: ಡಿಸಿ

09:17 PM May 14, 2021 | Team Udayavani |

ಬಳ್ಳಾರಿ: ಕೋವಿಡ್‌ ಹಿನ್ನೆಲೆಯಲ್ಲಿ ಪಡಿತರ ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳು ಮುದ್ರೆ (ಬಯೋಮೆಟ್ರಿಕ್‌) ನೀಡಿ ಪಡೆಯಬೇಕಾಗಿರುವುದಕ್ಕೆ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆ ವ್ಯಾಪಿಸುತ್ತಿರುವ ಕಾರಣ ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಮೇ ತಿಂಗಳ ಪಡಿತರ ಚೀಟಿದಾರರ ಬೆರಳು ಮುದ್ರೆ (ಬಯೋಮೆಟ್ರಿಕ್‌) ಪಡೆಯದೇ ವಿತರಿಸಲು ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ತಿಳಿಸಲಾಗಿದೆ. ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿ ಮಾಲೀಕರು ಪಡಿತರ ವಿತರಿಸಲು ಪಡಿತರ ಚೀಟಿದಾರರು ಬೆರಳು ಮುದ್ರೆ (ಬಯೋಮೆಟ್ರಿಕ್‌) ನೀಡುವಂತೆ ಒತ್ತಾಯಿಸಬಾರದೆಂದು ಅವರು ತಿಳಿಸಿದ್ದಾರೆ.

ಪಡಿತರ ಚೀಟಿದಾರರು ಆಧಾರ್‌ ಜತೆ ಜೋಡಿಸಿಕೊಂಡಿರುವ ಮೊಬೈಲ್‌ ಸಂಖ್ಯೆಗೆ ಓಟಿಪಿ ನೀಡಿ ವಿತರಿಸಲಾಗುವುದು. ವೃದ್ಧರು, ಅನಾರೋಗ್ಯ ಪೀಡಿತರು ಮತ್ತು ವಿಶೇಷಚೇತನರಿಗೆ ವಿನಾಯತಿ ಸೌಲಭ್ಯದಡಿ ಪಡಿತರ ವಿತರಿಸಲಾಗುವುದು. ಪಡಿತರ ಚೀಟಿದಾರರ ಪರಿಶೀಲನಾ ಪಟ್ಟಿ/ ಕೈಬಿಲ್ಲು ಮೂಲಕವೂ ಪಡಿತರವನ್ನು ನೇರವಾಗಿ ವಿತರಿಸಲಾಲಾಗುವುದು. ಪಡಿತರ ಪಡೆಯಲು ರಾಜ್ಯ ಮತ್ತು ಹೊರ ರಾಜ್ಯದ ಪಡಿತರ ಚೀಟಿದಾರರಿಗೆ ಪೋರ್ಟಬಲಿಟಿ ಸೌಲಭ್ಯದ ಮೂಲಕ ಪಡಿತರ ವಿತರಣೆ ಸಹ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಕೋವಿಡ್‌ ಹಿನ್ನೆಲೆಯಲ್ಲಿ 2021ನೇ ಮೇ ತಿಂಗಳ ಪಡಿತರ ಪರಿಶೀಲನಾ ಪಟ್ಟಿ (ಚೆಕ್‌ ಲಿಸ್ಟ್‌) ಅಥವಾ ಯಾವುದಾದರೂ ಮೊಬೈಲ್‌ಗೆ ಓಟಿಪಿ ನೀಡುವ ಮೂಲಕ ವಿತರಿಸಲು ಅವಕಾಶ ನೀಡಬೇಕೆಂದು ರಾಜ್ಯ ಪಡಿತರ ವಿತರಕರ ಸಂಘ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿ ಪಡಿತರ ವಿತರಣೆಗೆ ಪರಿಶೀಲನಾ ಪಟ್ಟಿ ಸೌಲಭ್ಯ ಸೇರಿ ಪಡಿತರ ವಿತರಣೆಗೆ ಸುಲಭವಾಗಲು ಅನೇಕ ರೀತಿ ಅವಕಾಶ ನ್ಯಾಯಬೆಲೆ ಅಂಗಡಿಗೆ ಕಲ್ಪಿಸಲಾಗಿದೆ.

ಯಾವುದಾದರೂ ಮೊಬೈಲ್‌ಗೆ ಓಟಿಪಿ ಸೌಲಭ್ಯ ನೀಡುವ ಮೂಲಕ ಪಡಿತರ ವಿತರಿಸುವ ವಿಷಯವಾಗಿ ಸ್ಪಷ್ಟಪಡಿಸುವುದು ಏನೆಂದರೆ, ಇಂತಹ ಸೌಲಭ್ಯ ಕೋವಿಡ್‌ ಒಂದನೇ ಅಲೆ ಸಂದರ್ಭದಲ್ಲಿ ಕಲ್ಪಿಸಲಾಗಿತ್ತು. ಆಗ ಕೆಲವು ನ್ಯಾಯಬೆಲೆ ಅಂಗಡಿ ಮಾಲೀಕರು ಒಂದೇ ಮೊಬೈಲ್‌ ನಂಬರ್‌ ಬಳಸಿ ಅನೇಕ ಪಡಿತರ ಚೀಟಿಗಳಿಗೆ ಪಡಿತರ ವಿತರಿಸಿರುವ ಪ್ರಕರಣಗಳು ವರದಿಯಾಗಿವೆ. ಇದರಿಂದ ಪಡಿತರ ದುರುಪಯೋಗ ಮಾಡಲು ಅವಕಾಶವಿರುತ್ತದೆ ಎಂದು ಅವರು ವಿವರಿಸಿದ್ದಾರೆ. ಕೇಂದ್ರ ಸರ್ಕಾರದ ನೀತಿಯಂತೆ ಪಡಿತರವನ್ನು ರಾಜ್ಯಗಳು ಬಯೋದೃಢೀಕರಣದ ಮೂಲಕ ವಿತರಿಸಿದರೆ ಮಾತ್ರ ಅಂತಹ ವಿತರಣೆ ಮಾಹಿತಿಯೂ ಕೇಂದ್ರ ಸರ್ಕಾರದ ದತ್ತಾಂಶ ಕೇಂದ್ರಕ್ಕೆ ರವಾನೆಯಾಗುತ್ತದೆ.

Advertisement

ಅದರ ಆಧಾರದ ಮೇಲೆ ಕೇಂದ್ರ ಸರ್ಕಾರ ಪ್ರತಿ ತಿಂಗಳ ಆಹಾರಧಾನ್ಯ ಹಂಚಿಕೆ ನೀಡುತ್ತದೆ. ಆದಾಗ್ಯೂ ರಾಜ್ಯದಲ್ಲಿ ಎದುರಾಗಿರುವ ಕೋವಿಡ್‌ ಎರಡನೇ ಅಲೆ ಪರಿಣಾಮ ಗಮನದಲ್ಲಿಟ್ಟುಕೊಂಡು ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಅಧಿ ಕಾರಿಗಳ ಮೇಲೆ ಯಾವುದೇ ಆರೋಗ್ಯದ ದುಷ್ಪರಿಣಾಮ ಉಂಟಾಗುವುದನ್ನು ತಡೆಯಲು ಸರಳ ಮತ್ತು ಪಾರದರ್ಶಕ ಪಡಿತರ ವಿತರಣೆಗೆ ಅವಕಾಶ ಮಾಡಲಾಗಿದೆ. ಪಡಿತರ ವಿತರಣೆಯಲ್ಲಿ ಸರಳ ಮತ್ತು ಪಾರದರ್ಶಕ ಅವಕಾಶ ಕಲ್ಪಿಸಲಾಗಿದೆ; ಆದರೂ ಕೆಲವರು ಗೊಂದಲ ಸೃಷ್ಟಿಸುತ್ತಿರುವುದು ಆಧಾರರಹಿತ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಉಂಟಾಗಿರುವ ಕೋವಿಡ್‌ ರೋಗದ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಪಡಿತರ ಚೀಟಿದಾರರಿಗೆ ಕೇಂದ್ರ-ರಾಜ್ಯ ಸರ್ಕಾರಗಳು ಹಂಚಿಕೆ ನೀಡಿರುವ ಪಡಿತರದ ವಸ್ತುಗಳು ನಿಗದಿತ ಸಮಯ ಮತ್ತು ಪ್ರಮಾಣದಲ್ಲಿ ಮತ್ತು ಆರೋಗ್ಯಪೂರ್ಣ ವಾತಾವರಣದಲ್ಲಿ ಸರಳ ಮಾರ್ಗಗಳ ಮೂಲಕ ವಿತರಣೆ ಆಗುವಂತೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ವಿವರಿಸಿದ್ದಾರೆ.

ಯಾವುದೇ ಪಡಿತರ ಚೀಟಿದಾರರಿಗೆ ಅನಾನುಕೂಲವಾದಲ್ಲಿ ಅವರು ತಮ್ಮ ದೂರು ಬೆಂಗಳೂರಿನ ಆಯುಕ್ತಾಲಯದ ನಿಯಂತ್ರಣ ಕೊಠಡಿ ಸಂಖ್ಯೆ 1967, 1800-425-9339 ಮತ್ತು 14445 ದಾಖಲಿಸಲು ಹಾಗೂ ಜಂಟಿ ನಿರ್ದೇಶಕರ ಕಾರ್ಯಾಲಯ ಬಳ್ಳಾರಿ ಕಚೇರಿ ಸಂಖ್ಯೆ: 08392-272557 ಹಾಗೂ ಸಂಬಂ ಧಿಸಿದ ಗ್ರಾಪಂಗೆ ಅಥವಾ ತಹಶೀಲ್ದಾರ್‌ಗೆ ದೂರು ಸಲ್ಲಿಸಲು ಜಿಲ್ಲಾಧಿ ಕಾರಿ ಪವನಕುಮಾರ ಮಾಲಪಾಟಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next