Advertisement

ಕೊರೊನಾ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ

09:46 PM May 26, 2021 | Team Udayavani |

ಬಳ್ಳಾರಿ: ಕೊರೊನಾ ಮುಂಚೂಣಿ ಕಾರ್ಯಕರ್ತರಿಗೆ ಆಂದೋಲನದ ರೂಪದಲ್ಲಿ ಲಸಿಕೆ ನೀಡಲು ಜಿಲ್ಲಾಡಳಿತ ಉದ್ದೇಶಿಸಿದೆ. ಒಬ್ಬರೂ ಕೂಡ ಈ ಲಸಿಕೆಯಿಂದ ವಂಚಿತರಾಗದಂತೆ ಸಮಗ್ರ ವಿವರಗಳನ್ನು ವಿವಿಧ ಇಲಾಖೆಗಳ ಅ ಧಿಕಾರಿಗಳು ಬುಧವಾರ ಮಧ್ಯಾಹ್ನದೊಳಗೆ ನೀಡುವಂತೆ ಜಿಲ್ಲಾಧಿ ಕಾರಿ ಪವನಕುಮಾರ ಮಾಲಪಾಟಿ ಸೂಚನೆ ನೀಡಿದ್ದಾರೆ.

Advertisement

ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೊರೊನಾ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ಸಂಬಂ ಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಮಂಚೂಣಿ ಕಾರ್ಯಕರ್ತರು ಎಂದು ಗುರುತಿಸಲಾಗಿರುವ ವಿವಿಧ ಸಮೂಹಗಳ 18ರಿಂದ 44 ವರ್ಷದ ವಯೋಮಾನದ ಸಿಬ್ಬಂದಿಗೆ ಆದ್ಯತೆಮೇರೆಗೆ ಕೋವಿಡ್‌ ಲಸಿಕಾಕರಣ ಆಯೋಜಿಸುವಂತೆ ರಾಜ್ಯಮಟ್ಟದ ಕಾರ್ಯಪಡೆ ಸಭೆ ನಿರ್ದೇಶನದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ವಿವಿಧ ಸಮೂಹಗಳಿಗೆ ಸಂಬಂಧಿ  ಸಿದಂತೆ ನೇಮಿಸಲಾದ ನೋಡಲ್‌ ಅಧಿಕಾರಿಗಳು ಕೂಡಲೇ ತಮ್ಮ ವ್ಯಾಪ್ತಿಗೆ ಒಳಪಡುವ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ನೀಡಬೇಕು.

ಸದರಿ ಸಮೂಹದ ಫಲಾನುಭವಿಗಳಿಗೆ ಒಂದೊಂದು ದಿನಾಂಕ ನಿಗದಿಪಡಿಸಿ ಅವರಿಗೆ ಲಸಿಕೆ ಹಾಕಿಸಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು. ಅಂಗವೈಕಲ್ಯ ಹೊಂದಿರುವ (ಮಾನಸಿಕ ಅಸ್ವಸ್ಥತೆ ಸೇರಿದಂತೆ) ಫಲಾನುಭವಿಗಳು ಮತ್ತು ಆರೈಕೆದಾರರು, ಖೈದಿಗಳು, ಚಿತಾಗಾರ/ಸ್ಮಶಾನ/ರುದ್ರಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಸ್ವ ಸಹಾಯಕರು, ಕೋವಿಡ್‌ ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು, ಸರ್ಕಾರಿ ಸಾರಿಗೆ ಸಿಬ್ಬಂದಿ, ಆಟೋ ಮತ್ತು ಕ್ಯಾಬ್‌ ಚಾಲಕರು, ವಿದ್ಯುತ್‌, ನೀರು ಸರಬರಾಜು ಮಾಡುವವರು, ಅಂಚೆ ಇಲಾಖೆ, ನ್ಯಾಯಾಂಗ ಇಲಾಖೆ ಸಿಬ್ಬಂದಿ, ಬೀದಿ ಬದಿಯ ವ್ಯಾಪಾರಿಗಳು, ಭದ್ರತೆ ಮತ್ತು ಕಚೇರಿಗಳ ಹೌಸ್‌ ಕೀಪಿಂಗ್‌, ಮಕ್ಕಳ ಸಂರಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಾಧ್ಯಮದವರು, ಆಸ್ಪತ್ರೆಗಳಿಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು, ಆಯಿಲ್‌ ಇಂಡಸ್ಟ್ರೀ ಮತ್ತು ಗ್ಯಾಸ್‌ ಸರಬರಾಜು ಮಾಡುವವರು (ಪೆಟ್ರೋಲ್‌ ಬಂಕ್‌, ಕರ್ಮಚಾರಿ ಒಳಗೊಂಡಂತೆ), ಔಷಧ ತಯಾರಿಸುವ ಕಂಪನಿಯ ಸಿಬ್ಬಂದಿ, ಆಸ್ಪತ್ರೆಗಳಿಗೆ ಆಕ್ಸಿಜನ್‌, ಔಷ ಧಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವ ಸಿಬ್ಬಂದಿ, ಅಧಿಕೃತ ಗುರುತಿನ ಚೀಟಿ ಹೊಂದಿರದ ಫಲಾಭವಿಗಳು-ವೃದ್ಧಾಶ್ರಮವಾಸಿಗಳು ಮತ್ತು ವಯೋವೃದ್ಧರ ಆರೈಕೆದಾರರು, ನಿರ್ಗತಿಕರು, ಭಾರತೀಯ ಆಹಾರ ನಿಗಮ ಸಿಬ್ಬಂದಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಿಬ್ಬಂದಿ ಸಮೂಹವನ್ನು ಮಂಚೂಣಿ ಕಾರ್ಯಕರ್ತರೆಂದು ಗುರುತಿಸಿ ಅವರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ಅವರು ವಿವರಿಸಿದರು.

ವಿವಿಧ ಇಲಾಖೆಗಳ ವ್ಯಾಪ್ತಿಗೊಳಪಡುವ ಸಮೂಹಗಳಿಗೆ ಇದುವರೆಗೆ ಎಷ್ಟು ಜನರು ಲಸಿಕೆ ಪಡೆದುಕೊಂಡಿದ್ದಾರೆ. ಇನ್ನೆಷ್ಟು ಜನರು ಪಡೆದುಕೊಳ್ಳಬೇಕು ಎಂಬುದರ ವಿವರವನ್ನು ಡಿಸಿ ಮಾಲಪಾಟಿ ಅವರು ಪಡೆದುಕೊಂಡರು. ಈ ಸಂದರ್ಭದಲ್ಲಿ ಸಮೂಹದ ಫಲಾನುಭವಿಗಳಿಗೆ ಕೊರೊನಾ ಸೋಂಕು ತಗುಲಿದ್ದಲ್ಲಿ ಮೂರು ತಿಂಗಳವರೆಗೆ ಲಸಿಕೆ ಪಡೆದುಕೊಳ್ಳದಂತೆ ಅವರಿಗೆ ತಿಳಿಸಬೇಕು ಎಂದು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹೊÉàಟ್‌, ಅಪರ ಜಿಲ್ಲಾ ಧಿಕಾರಿ ಪಿ.ಎಸ್‌.ಮಂಜುನಾಥ ಮತ್ತಿತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next