Advertisement

ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಆಗ್ರಹ

05:39 PM Jan 27, 2021 | Team Udayavani |

ಹೂವಿನಹಡಗಲಿ: ಸುಕ್ಷೇತ್ರ ಮೈಲಾರ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದ್ಯ ಮಾರಾಟವನ್ನು ತಡೆ ಹಿಡಿಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಮೈಲಾರ ಗ್ರಾಮದ ಮಹಿಳೆಯರು ತಹಶೀಲ್ದಾರ್‌ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

Advertisement

ಮೈಲಾರ ಗ್ರಾಮ ಕರ್ನಾಟಕದ ಇತಿಹಾಸ ಪ್ರಸಿದ್ಧವಾದ ಕ್ಷೇತ್ರವಾಗಿದ್ದು ಈ ಕೂಡಲೇ ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು. ಇನ್ನೂ ತಾಲೂಕಿನಲ್ಲಿ ಬೆಳೆ ಪರಿಹಾರ ಸಮರ್ಪಕವಾಗಿ ನೀಡಿಲ್ಲ. ತಾಲೂಕಿನಲ್ಲಿ ಈ ಹಿಂದೆ ಮಳೆಯಿಂದಾಗಿ ಕುಸಿತ ಕಂಡಂತಹ ಮನೆಗಳಿಗೆ ಪರಿಹಾರ ಹಣ ಹಾಕಿಲ್ಲ. ತಾಲೂಕಿನ ಸಬ್‌ರಿಜಿಸ್ಟರ್‌, ಇತರೆ ಇಲಾಖೆಯಲ್ಲಿ ಲಂಚದ ಹಾವಳಿ ಹೆಚ್ಚಾಗಿದೆ. ಈ ಕೂಡಲೇ ಲಂಚಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಡಿಳ್ಳೆಪ್ಪ, ತಾಲೂಕು ಅಧ್ಯಕ್ಷ ಪಾಲಾಕ್ಷ ಗೌಡ್‌, ಕುಮಾರ್‌, ಲಕ್ಷ್ಮಣ ಇದ್ದರು.

ಓದಿ : ಕರ್ನಾಟಕ ಅಭಿವೃದ್ಧಿಯಲ್ಲಿ ಮುಂಚೂಣಿ ರಾಜ್ಯ: ಚವ್ಹಾಣ

Advertisement

Udayavani is now on Telegram. Click here to join our channel and stay updated with the latest news.

Next