Advertisement

ಬಳ್ಳಾರಿ: ಮಟ್ಕಾ ಬುಕ್ಕಿ, ಅಕ್ಕಿ ವ್ಯಾಪಾರಿಯನ್ನು ಅಟ್ಟಾಡಿಸಿಕೊಂಡು ಹತ್ಯೆಗೈದ ದುಷ್ಕರ್ಮಿಗಳು

12:50 PM Sep 28, 2022 | Team Udayavani |

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ವೃತ್ತದಲ್ಲಿ ಅಕ್ಕಿ ವ್ಯಾಪಾರಿ ಮಟ್ಕಾ ಬುಕ್ಕಿ ಕುಂಟ ಮಂಜುನಾಥ ಎನ್ನುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.

Advertisement

ನಗರದ ಕೊಲಿಮಿ ಬಜಾರ್ ನಿವಾಸಿಯಾದ ಕುಂಟ ಮಂಜುನಾಥ್ ನನ್ನು ರೇಡಿಯೋ ಪಾರ್ಕ್ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಳಿ ಬುಧವಾರ ಬೆಳಗಿನ ಜಾವ ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ ಮಂಜುನಾಥ್ ನನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಬುಧವಾರ ಬೆಳಗ್ಗೆ ಎಸ್ ಪಿ ಸೈದುಲು ಅಡಾವತ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ದುಷ್ಕಮಿಗಳು ಬೈಕ್ ನಲ್ಲಿ ಬಂದು ಕೃತ್ಯ ಎಸಗಿದ್ದಾರೆ. ಕೊಲೆ‌ ಮಾಡುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ದೃಶ್ಯಗಳನ್ನ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಟಾಲಿವುಡ್ ಸೂಪರ್ ಸ್ಟಾರ್ ʻಮಹೇಶ್ ಬಾಬುʼಗೆ ಮಾತೃ ವಿಯೋಗ

Advertisement

ಕೊಲೆಯಾದ ಮಂಜು ವಿವಿಧ ವ್ಯವಹಾರಗಳಲ್ಲಿ ತೊಡಗಿಕೊಂಡಿರುವ ಹಿನ್ನೆಲೆಯಲ್ಲಿ ಅಕ್ಕಿ ವ್ಯಾಪಾರ, ರಿಯಲ್ ಎಸ್ಟೇಟ್, ಮಟ್ಕಾ ದಂಧೆಯ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಕೊಲೆ ಮಾಡಿದ ಆರೋಪಿಗಳಿಗೆ ಶೋಧ ಕಾರ್ಯ ಮುಂದುವರೆದಿದೆ ಎಂದ ಅವರು, ಆರೋಪಿಗಳ ಪತ್ತೆಗೆ ಡಿವೈಎಸ್ ಪಿ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ ಎಂದು ಎಸ್ ಪಿ ಸೈದುಲು ಅಡಾವತ್ ತಿಳಿಸಿದ್ದಾರೆ.

ಕೊಲೆಯಾದ ವ್ಯಕ್ತಿ ಅಕ್ಕಿ ವ್ಯಾಪಾರ ಮಾಡುತ್ತಿದ್ದರು. ಅಕ್ರಮವಾಗಿ ಅಕ್ಕಿ ಸಾಗಾಟ ಮತ್ತು ವ್ಯಾಪಾರ ಮಾಡುತ್ತಿದ್ದ ಮಂಜುನಾಥನ ವಿರುದ್ದ ಈಗಾಗಲೇ ಅಕ್ರಮ ಅಕ್ಕಿ ಸಾಗಾಟ, ಮಟ್ಕಾಕ್ಕೆ ಸಂಬಂಧಿಸಿದ 7-8 ಪ್ರಕರಣಗಳು ದಾಖಲಾಗಿವೆ. ಕೊಲೆಗೆ ನಿಖರ ಕಾರಣಕ್ಕಾಗಿ ತನಿಖೆ ನಡೆಸುತ್ತಿದ್ದೇವೆ. ಘಟನೆ ಕುರಿತು ಕೌಲಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next