Advertisement

ಬಲೂನಿಗೆ ಗಾಳಿ ತುಂಬಿಸುವ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ನಾಲ್ವರು ಸಾವು:10ಮಂದಿಗೆ ಗಂಭೀರ ಗಾಯ

08:56 AM Aug 23, 2021 | Team Udayavani |

ಭೋಪಾಲ್/ ಲಕ್ನೋ:  ಬಲೂನಿಗೆ ಗಾಳಿ ತುಂಬಿಸುವ ಗ್ಯಾಸ್ ಸಿಲಿಂಡರ್ ಸ್ಫೋಟವಾದ ಎರಡು ಪ್ರತ್ಯೇಕ ಘಟನೆಗಳು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ನಡೆದಿದೆ.

Advertisement

ಮಧ್ಯಪ್ರದೇಶದ ಚಿಂದ್ವಾರ ಮತ್ತು ಉತ್ತರ ಪ್ರದೇಶದ ವಾರಣಾಸಿಯಲ್ಲಿ ರವಿವಾರ ಈ ಘಟನೆಗಳು ನಡೆದಿದೆ. ಎರಡು ಪ್ರಕರಣಗಳಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ.

ಚಿಂದ್ವಾರ ಪ್ರಕರಣದಲ್ಲಿ ತೇಜುದ್ದೀನ್ ಅನ್ಸಾರಿ (40 ವ) ಮತ್ತು ಶೇಕ್ ಇಸ್ಮಾಯಿಲ್ (70 ವ) ಮೃತಪಟ್ಟರೆ, ವಾರಣಾಸಿಯಲ್ಲಿ ಗೀತಾ ದೇವಿ (40 ವ) ಮತ್ತು ಲಲ್ಲಾ (30ವ ) ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಸವಾಲುಗಳ ಸಾಗರದಲ್ಲಿ ಈಜಿದ ಕನ್ನಡಿಗ: 19 ಶಸ್ತ್ರಚಿಕಿತ್ಸೆ ಗೆದ್ದ ನಿರಂಜನ್‌

ಗಾಯಾಳುಗಳಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಂದ್ವಾರ ಪ್ರಕರಣದಲ್ಲಿ ಸ್ಫೋಟದ ಶಬ್ಧ ಸುಮಾರು ದೂರದವರೆಗೆ ಕೇಳಿಸಿದ್ದು, ಕಂಪನದ ಅನುಭವವಾಗಿದೆ ಎನ್ನಲಾಗಿದೆ.

Advertisement

ಬಲೂನ್ ಮಾರಾಟಗಾರ ಬಲೂನುಗಳಲ್ಲಿ ಗ್ಯಾಸ್ ತುಂಬುತ್ತಿದ್ದಾಗ ಈ ಭಯಾನಕ ಘಟನೆ ನಡೆದಿದೆ. ಸ್ಫೋಟದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದರು ಆದರೆ ಅವರು ಇನ್ನೂ ಅಧಿಕೃತ ಹೇಳಿಕೆ ನೀಡಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next