Advertisement

ಬಲ್ನಾಡು: ಪಾಣತ್ತೂರು ಬಸ್ ದುರಂತದಲ್ಲಿ ಮೃತಪಟ್ಟ ತಂದೆ –ಮಗನ ಅಂತ್ಯಕ್ರಿಯೆ

01:25 PM Jan 04, 2021 | Team Udayavani |

ಪುತ್ತೂರು: ಪಾಣತ್ತೂರು ಸಮೀಪದ ಪರಿಯಾರಂ ಎಂಬಲ್ಲಿ ಜ.3ರಂದು ಪಲ್ಟಿಯಾಗಿ ಬಸ್‌ನಲ್ಲಿದ್ದ ಪುತ್ತೂರು ತಾಲೂಕಿನ 5 ಮಂದಿ ಸೇರಿದಂತೆ ಒಟ್ಟು 7 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಮೃತಪಟ್ಟವರ ಪೈಕಿ ಬಲ್ನಾಡು ಚನಿಲ ಪಾಲೆಚ್ಚಾರು ಚೋಮ ನಾಯ್ಕರವರ ಪುತ್ರ ರಾಜೇಶ್ (38.ವ) ಹಾಗೂ ಅವರ ಪುತ್ರ ಆದರ್ಶ(14ವ) ರವರ ಅಂತ್ಯಸಂಸ್ಕಾರ ಸೋಮವಾರ ಚಿಕ್ಕ ಪುತ್ತೂರು ಸ್ಮಶಾನದಲ್ಲಿ ನಡೆಸಲಾಯಿತು.

Advertisement

ಈ ಸಂದರ್ಭದಲ್ಲಿ ಕ್ಯಾಂಪ್ಕೋ ನಿಕಟಪೂರ್ವ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನಿರ್ದೇಶಕ ಕಿರಣ್ ಮತ್ತು ಮೃತರ ಸಂಬಂಧಿಕರು ಮತ್ತು ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next