Advertisement

ಬುರ್ಖಾ ನಿಷೇಧಿಸಿದ್ದಕ್ಕೆ ಬೆದರಿಕೆ

07:16 AM May 05, 2019 | mahesh |
ತಿರುವನಂತಪುರ: ಕೆಲವೇ ದಿನಗಳ ಹಿಂದಷ್ಟೇ ಕೇರಳದ ಮುಸ್ಲಿಂ ಎಜುಕೇಶನ್‌ ಸೊಸೈಟಿಯಲ್ಲಿ ಬುರ್ಖಾ ನಿಷೇಧದ ಆದೇಶ ಹೊರಡಿಸಿದ್ದು, ಸಂಸ್ಥೆಯ ಮುಖ್ಯಸ್ಯ ಪಿಎ ಫ‌ಜಲ್ ಗಫ‌ೂರ್‌ಗೆ ಅನಾಮಿಕ ವ್ಯಕ್ತಿಗಳಿಂದ ಪ್ರಾಣ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅವರು ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದಾರೆ. ಈ ಆದೇಶವನ್ನು ಹಿಂಪಡೆಯದಿದ್ದರೆ ಜೀವ ತೆಗೆಯುವುದಾಗಿ ಕರೆ ಮಾಡಿದವರು ಬೆದರಿಸಿದ್ದಾರೆ.

ಕರೆ ಮಾಡಿದಾತ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಗಫ‌ೂರ್‌ ಹೇಳಿದ್ದಾರೆ. ಎಪ್ರಿಲ್ 17ರಂದು ಹೊರಡಿಸಲಾದ ಸುತ್ತೋಲೆಯಲ್ಲಿ ಮುಖ ಮುಚ್ಚುವ ಯಾವುದೇ ಬಟ್ಟೆಯನ್ನು ಧರಿಸಬಾರದು ಎಂದು ಸೂಚಿಸಲಾಗಿದೆ.

Advertisement

ಮುಂದಿನ ಶೈಕ್ಷಣಿಕ ವರ್ಷದಿಂದ ಈ ಆದೇಶ ಜಾರಿಗೆ ಬರಲಿದ್ದು, ಸಾಮಾನ್ಯ ಸಂಪ್ರದಾಯಕ್ಕೆ ಅನುಗುಣವಾಗಿ ಉಡುಪು ಧರಿಸಬೇಕು ಎಂದು ಸೂಚಸಿಲಾಗಿದೆ. ಇದಕ್ಕೆ ಸಾಂಪ್ರದಾಯಿಕ ಮುಸ್ಲಿಂ ಸಮುದಾಯ ಆಕ್ಷೇಪ ವ್ಯಕ್ತಪಡಿಸಿದೆ. ಆದರೆ ಶಿಕ್ಷಣ ಸಂಸ್ಥೆ ಇದಕ್ಕೆ ಬೆದರದೇ ತನ್ನ ನಿಲುವಿಗೆ ಬದ್ಧವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next