Advertisement

Onion: ಮುಂದಿನ ಮಾರ್ಚ್‌ವರೆಗೆ ಈರುಳ್ಳಿ ರಫ್ತಿಗೆ ನಿರ್ಬಂಧ

11:59 PM Dec 08, 2023 | Pranav MS |

ನವದೆಹಲಿ: ಮುಂದಿನ ವರ್ಷದ ಮಾರ್ಚ್‌ವರೆಗೆ ಈರುಳ್ಳಿ ರಫ‌¤ನ್ನು ನಿಷೇಧಿಸಿ ಕೇಂದ್ರ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ದೇಶೀಯವಾಗಿ ಈರುಳ್ಳಿಯ ಲಭ್ಯತೆಯನ್ನು ಹೆಚ್ಚಿಸುವ ಮತ್ತು ದರ ಏರಿಕೆಯನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

Advertisement

ರಫ್ತು ನೀತಿಗೆ ತಿದ್ದುಪಡಿ ತರಲಾಗಿದ್ದು, 2024ರ ಮಾರ್ಚ್‌ 31ರವರೆಗೆ ಈರುಳ್ಳಿಯ ರಫ್ತಿಗೆ ನಿರ್ಬಂಧ ಹೇರಲಾಗಿದೆ ಎಂದು ವಿದೇಶಿ ವ್ಯವಹಾರದ ಮಹಾ ನಿರ್ದೇಶನಾಲಯ ತಿಳಿಸಿದೆ. ದೆಹಲಿಯಲ್ಲಿ ಪ್ರಸ್ತುತ ಈರುಳ್ಳಿ ದರ ಕೆಜಿಗೆ 70-80ರೂ. ಇದೆ.

ಈ ಹಿಂದೆ ಅಕ್ಟೋಬರ್‌ ತಿಂಗಳಲ್ಲಿ ಈರುಳ್ಳಿ ದರವು ಗಣನೀಯವಾಗಿ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ದಾಸ್ತಾನು ಇಟ್ಟಿದ್ದ ಈರುಳ್ಳಿಯನ್ನು ಕೆಜಿಗೆ 25 ರೂ.ಗಳಂತೆ ಸಬ್ಸಿಡಿ ದರದಲ್ಲಿ ಮಾರಾಟ ಮಾಡಿತ್ತು.

ರೈತರ ಪ್ರತಿಭಟನೆ:

ಈರುಳ್ಳಿ ರಫ್ತಿಗೆ ನಿರ್ಬಂಧ ಹೇರಿದ್ದನ್ನು ಖಂಡಿಸಿ ಶುಕ್ರವಾರ ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯಲ್ಲಿ ನೂರಾರು ರೈತರು ಜಮಾಯಿಸಿ, ಮುಂಬೈ-ಆಗ್ರಾ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಲಸಲ್‌ಗಾಂವ್‌, ನಂದಗಾಂವ್‌, ಪಿಂಪಲ್‌ಗಾಂವ್‌ ಮತ್ತು ಉಮಾರಾಣೆಯ ಮಾರುಕಟ್ಟೆಗಳಲ್ಲೂ ಪ್ರತಿಭಟನೆಗಳನ್ನು ನಡೆಸಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next