Advertisement

ಕೊಲೆ ಪ್ರಕರಣದ ಹಿಂದಿರುವ ಸಂಘಟನೆಗಳನ್ನು ಮಟ್ಟ ಹಾಕಿ: ಯು.ಟಿ.ಖಾದರ್ ಆಗ್ರಹ

02:28 PM Jul 29, 2022 | Team Udayavani |

ಸುರತ್ಕಲ್: ಬೆಳ್ಳಾರೆ ಮಸೂದ್, ಪ್ರವೀಣ್ ನೆಟ್ಟಾರು, ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಇದರ ಬಗ್ಗೆ ಸಮರ್ಥ ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕು ಎಂದು ವಿಧಾನ ಸಭಾ ಪ್ರತಿಪಕ್ಷ ದ ಉಪನಾಯಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.

Advertisement

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾವ ಸಂಘಟನೆಗಳು ಕುಮ್ಮಕ್ಕು ನೀಡಿದೆಯೋ ಅವುಗಳನ್ನು ಮಟ್ಟ ಹಾಕುವ ಕೆಲಸವನ್ಬು ಪೊಲೀಸ್ ಇಲಾಖೆ ಹಾಗೂ ಸರಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ನಮಗೆ ಎಲ್ಲ ಜನರ ಜೀವವೂ ಮುಖ್ಯ: ಸಿಎಂ ಬಸವರಾಜ ಬೊಮ್ಮಾಯಿ

ಸರಕಾರ ಈ ರೀತಿ ಮತಾಂಧ ಶಕ್ತಿಗಳಿಂದ ಹತ್ಯೆಗೀಡಾದವರಿಗೆ ಪರಿಹಾರ ನೀಡುವುದು ತೆರಿಗೆ ದುಡ್ಡಿನಿಂದ. ಹಾಗಾಗಿ ಹತ್ಯೆಗೀಡಾದ ಎಲ್ಲ ಮೂವರ ಹೆತ್ತವರ ನೋವನ್ನು ಸಮಾನವಾಗಿ ಪರಿಗಣಿಸಿ ಪಕ್ಷಪಾತವಿಲ್ಲದೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next