Advertisement

ಬನಹಟ್ಟಿ: ಚಿಲ್ಲರೆ ನೆಪದಲ್ಲಿ ಹಣ ದೋಚಿ ಪರಾರಿ

09:35 AM Mar 03, 2021 | Team Udayavani |

ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ 500 ರೂ. ಹಿಡಿದುಕೊಂಡು ಸಹಕಾರಿ ಸಂಘವೊಂದಕ್ಕೆ ನುಗ್ಗಿದ ಇಬ್ಬರು ಅನಾಮಿಕ ವ್ಯಕ್ತಿಗಳು ಚಿಲ್ಲರೆ ನೀಡುವಂತೆ ಸಂಘದಲ್ಲಿದ್ದ ಮಹಿಳಾ ಸಿಬ್ಬಂದಿಯನ್ನು ಕೇಳುವ ನೆಪದಲ್ಲಿ ಡ್ರಾದಲ್ಲಿದ್ದ 50 ಸಾವಿರ ರೂ.ಗಳನ್ನು ಕ್ಷಣಾರ್ಧದಲ್ಲಿ ದೋಚಿ ಪರಾರಿಯಾದ ಘಟನೆ ನಡೆದಿದೆ. ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಮೋಸದ ಪ್ರಕರಣ ದಾಖಲಾಗಿದೆ.

Advertisement

ಬಾಗಲಕೊಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ ಸೋಮವಾರ ಪೇಟೆಯಲ್ಲಿರುವ ಜನಧನ ಸೌಹಾರ್ದ ಸಂಘದಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಬೈಕ್ ಮೇಲೆ ಬಂದು ಸಂಘದಲ್ಲಿ ಮಹಿಳಾ ಸಿಬ್ಬಂದಿಯೋರ್ವಳು ಮಾತ್ರ ಇದ್ದದ್ದನ್ನು ಗಮನಿಸಿ ಚಿಲ್ಲರೆ ಕೇಳುವ ನೆಪದಲ್ಲಿ ಇಬ್ಬರಲ್ಲಿಯೇ ಗದ್ದಲಗೊಳಿಸಿಕೊಂಡಿದ್ದಾರೆ. ಸಂಘದ ಸಿಬ್ಬಂದಿ ಚಿಲ್ಲರೆಯಿಲ್ಲವೆಂದು ಸ್ಪಷ್ಟವಾಗಿ ತಿಳಿಸಿದರೂ ಕೊನೆಗೆ 100 ರೂ.ಗಳದ್ದಾದರೂ ನೀಡಿ ಎಂದು ಪೀಡಿಸಿದ್ದಾರೆ.

ಇದನ್ನೂ ಓದಿ:  ಇಂದಿರಾಗಾಂಧಿ ತುರ್ತುಪರಿಸ್ಥಿತಿ ಹೇರಿಕೆ ತಪ್ಪುನಿರ್ಧಾರ; ಆದರೆ RSS ಇಂದು.. :ರಾಹುಲ್ ಗಾಂಧಿ

ಓರ್ವ ತಿಳಿಯದಂತೆ ಅನ್ಯ ಭಾಷೆ ಮಾತನಾಡುತ್ತ ಗೊಂದಲ ಸೃಷ್ಟಿಸಿದ್ದಾನೆ. ಮತ್ತೋರ್ವ ಸಿಬ್ಬಂದಿಯೊಂದಿಗೆ ಮಾತಿಗಿಳಿದಿದ್ದಾನೆ. ಏಕಾಏಕಿ ಡ್ರಾದಲ್ಲಿದ್ದ 500 ರೂ.ಗಳ ಕಂತೆಯಿರುವ ಬಂಡಲ್‌ವೊಂದನ್ನು ಕ್ಷಣಾರ್ಧದಲ್ಲಿ ಎತ್ತಿಕೊಂಡು ಇಬ್ಬರೂ ಬೈಕ್ ಏರಿ ಪರಾರಿಯಾದ ಘಟನೆ ನಡೆದಿದೆ.

ಇದನ್ನೂ ಓದಿ:  ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಗುಂಡಿನ ದಾಳಿ

Advertisement
Advertisement

Udayavani is now on Telegram. Click here to join our channel and stay updated with the latest news.

Next