Advertisement

ಕಾಡಾನೆ ದಾಳಿ: ಬಾಳೆ ತೋಟ ನಾಶ

04:42 PM Mar 11, 2022 | Team Udayavani |

ಕೊಟ್ಟಿಗೆಹಾರ: ಬಾಳೂರು ಹೋಬಳಿಯ ಕೂವೆ ಗ್ರಾಪಂ ವ್ಯಾಪ್ತಿಯ ಹೊಳೆಕೂಡಿಗೆ ಗ್ರಾಮದಲ್ಲಿ ಬುಧವಾರ ರಾತ್ರಿ ದಾಳಿ ನಡೆಸಿರುವ ಕಾಡಾನೆಗಳು ರೈತರ ಬಾಳೆ ತೋಟವನ್ನು ತುಳಿದು ನಾಶ ಮಾಡಿವೆ.

Advertisement

ಹೊಳೆಕೂಡಿಗೆಯ ಬಾಸಮ್ಮ ಹಾಗೂ ರಮೇಶ ಅವರ ಎರಡು ತೋಟಗಳಲ್ಲಿ ಮೂರು ಕಾಡಾನೆಗಳು ಸಂಚರಿಸಿ ಬಾಳೆಗಿಡಗಳನ್ನು ತಿಂದು ನಾಶ ಮಾಡಿವೆ. ತೋಟಗಳಲ್ಲಿಯೇ ಲದ್ದಿ ಹಾಕಿ ಹೋಗಿವೆ. ಕಳೆದ ಕೆಲವು ದಿನಗಳ ಹಿಂದೆಯೂ ಈ ಭಾಗದಲ್ಲಿ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು.

ಮತ್ತೆ ಕಾಡಾನೆ ದಾಳಿ ಗ್ರಾಮದಲ್ಲಿ ಮುಂದುವರಿದಿದ್ದು ಗ್ರಾಮಸ್ಥರು ಬೆಳೆ ಕಳೆದುಕೊಂಡು ನಷ್ಟ ಅನುಭವಿಸುವಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next