Advertisement

ರಾಜಕೀಯ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ನಿಂದ ಬಂದ್ ಕರೆ: ಸಿಎಂ ಬೊಮ್ಮಾಯಿ

11:08 AM Mar 06, 2023 | Team Udayavani |

ಹುಬ್ಬಳ್ಳಿ: ಭ್ರಷ್ಟಾಚಾರದ ಕೂಪ ಕಾಂಗ್ರೆಸ್, ಅವರು ಮಾಡಿರುವ ಕರ್ಮಕಾಂಡ ಒಂದಾ ಎರಡೇ. ಕಾಂಗ್ರೆಸ್ ಪಕ್ಷವೇ ಬಂದಾಗುತ್ತಿದೆ. ಇಂತಹ ಪ್ರತಿಭಟನೆ ಮೂಲಕ ಮುಂದಿನ ಚುನಾವಣೆ ನಡೆಸಬೇಕು ಎಂದುಕೊಂಡಿದ್ದಾರೆ. ಜನರು ಬಹಳ ಬುದ್ಧಿವಂತರು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ವಿರುಪಾಕ್ಷಪ್ಪ ಮಾಡಾಳ ಅವರ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯ ಅಸ್ತಿತ್ವಕ್ಕಾಗಿ ಬಂದ್ ಗೆ ಕರೆ ಕೊಟ್ಟಿದ್ದಾರೆ. ಆರೋಪ ಮಾಡುವವರು ಮೊದಲು ಶುದ್ಧ ಹಸ್ತರಾಗಿರಬೇಕು ಆಗ ಅವರ ಮಾತಿಗೆ ಬೆಲೆ ಬರುತ್ತದೆ ಎಂದು ರಾಜ್ಯ ಬಂದ್ ಗೆ ಕರೆ ನೀಡಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ:ತಂದೆಯಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದೆ.. ಕರಾಳ ಘಟನೆ ಬಗ್ಗೆ ಮಾತನಾಡಿದ ನಟಿ ಖುಷ್ಬು

ಕಾಂಗ್ರೆಸ್ ಪಕ್ಷದವರು ಹಾಸಿಗೆ, ದಿಂಬು, ಬಿಸ್ಕಿಟ್, ಕಾಫಿಯಿಂದ ಹಿಡಿದು ದೊಡ್ಡ ದೊಡ್ಡ ನೀರಾವರಿ ಯೋಜನೆಗಳನ್ನು ಬಿಟ್ಟಿಲ್ಲ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಎಲ್ಲಾ ಸಚಿವರಿಗೆ ಟಾರ್ಗೆಟ್ ನೀಡಿದ್ದರು. ಬೇಕಾದರೆ ಎಂ.ಬಿ.ಪಾಟೀಲ, ಕೆ.ಜೆ.ಜಾರ್ಜ್, ಮಹಾದೇವಪ್ಪ ಅಂತಹವರನ್ನ ಕೇಳಿದರೆ ನಿಜ ಗೊತ್ತಾಗುತ್ತದೆ. ಇಂತಹ ಯಾವುದೇ ಮಾತಿಗೆ ಜನರು ಬೆಲೆ ಕೊಡುವುದಿಲ್ಲ. ಸಂಪೂರ್ಣವಾಗಿ ಇವರ ಕೈ ಭ್ರಷ್ಟಾಚಾರದಿಂದ ಕೂಡಿದೆ. ಇವರ ಬಗ್ಗೆ ಜನರಿಗೆ ಗೊತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next