Advertisement

Bandipur: ಸೆರೆ ಹಿಡಿದಿದ್ದ ಹುಲಿ ಮುತ್ತೋಡಿಗೆ ರವಾನೆ?

01:10 AM Oct 19, 2024 | Team Udayavani |

ಚಿಕ್ಕಮಗಳೂರು: ಬಂಡೀಪುರ ಅಭಯಾರಣ್ಯದಲ್ಲಿ ಸೆರೆ ಹಿಡಿದಿದ್ದ ಹುಲಿಯನ್ನು ಭದ್ರಾ ಅಭಯಾರಣ್ಯ ವ್ಯಾಪ್ತಿಯ ಮುತ್ತೋಡಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಅಧಿ ಕಾರಿಗಳು ತಂದು ಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

Advertisement

ಹುಲಿಗೆ ರೇಡಿಯೋ ಕಾಲರ್‌ ಅಳವಡಿಸಿ ಮುತ್ತೋಡಿ ಅಭಯಾರಣ್ಯ ವ್ಯಾಪ್ತಿಯ ಅಂಚಿನಲ್ಲಿರುವ ಮೇಲಿನ ಹುಲುವತ್ತಿ ಅರಣ್ಯ ಪ್ರದೇಶದಲ್ಲಿ ಬಿಡಲಾಗಿದೆ. ಈ ಭಾಗದಲ್ಲಿ ಹತ್ತಾರು ಹಳ್ಳಿಗಳಿದ್ದು, ಆತಂಕ ಸೃಷ್ಟಿಸಿದೆ.

ಈಗಾಗಲೇ ಜಿಲ್ಲೆಯಲ್ಲಿ ಮಾನವ ಮತ್ತು ಕಾಡುಪ್ರಾಣಿಗಳ ಸಂಘರ್ಷದಿಂದ ಜನರು ಬೇಸತ್ತು ಹೋಗಿದ್ದು, ಮಾನವ ಸಂಘರ್ಷ ಹೊಂದಿರುವ ಹುಲಿ ಯನ್ನು ತಂದು ಬಿಟ್ಟಿರುವುದು ತಲೆನೋವಾಗಿ ಪರಿಣಮಿಸಿದೆ. ಅವೈಜ್ಞಾನಿಕ ಹಾಗೂ ಕಾನೂನು ಉಲ್ಲಂಘಿಸಿ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಮುತ್ತೋಡಿ ಯಲ್ಲಿ ಹುಲಿಯನ್ನು ಬಿಟ್ಟಿರುವ ಅಧಿ ಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next