Advertisement

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

04:59 PM Apr 20, 2024 | Team Udayavani |

ಗುಂಡ್ಲುಪೇಟೆ (ಚಾಮರಾಜನಗರ): ಹುಲಿ ದಾಳಿ ನಡೆಸಿದ ಪರಿಣಾಮ ಆನೆ ಮರಿ ನಡು ರಸ್ತೆಯಲ್ಲೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯದಲ್ಲಿ ನಡೆದಿದೆ.

Advertisement

ಬಂಡೀಪುರ-ಊಟಿ ರಾಷ್ಟ್ರೀಯ ಹೆದ್ದಾರಿ ಬದಿಯ ರಸ್ತೆ ಬದಿಯಲ್ಲಿ ಮರಿಯಾನೆ ಮೇವು ಮೆಯ್ಯುತ್ತಿದ್ದ ಸಂದರ್ಭ ಹುಲಿ ಏಕಾ ಏಕಿ ದಾಳಿ ನಡೆಸಿ ಕೊಂದು ಹಾಕಿದೆ. ಕೂಗಳತೆ ದೂರಲ್ಲಿದ್ದ ತಾಯಿಯಾನೆ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಹುಲಿ ಓಡಿ ಹೋಗಿತ್ತು ಎನ್ನಲಾಗುತ್ತಿದೆ.

ಮರಿಯಾನೆ ಮೃತ ದೇಹದ ಮುಂದೆ ನಿಂತು ತಾಯಿಯಾನೆ ರೋಧಿಸುತ್ತಿದೆ. ಇದರಿಂದ ಬಂಡೀಪುರ ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನಗಳು ತಾಯಿಯಾನೆ ದಾಳಿ ಮಾಡಬಹುದು ಎಂಬ ಆಂತಕದಲ್ಲಿ ಸಂಚಾರ ಮಾಡದೆ ನಿಂತಲ್ಲೆ ನಿಂತಿವೆ. ಇದರಿಂದ ಟ್ರಾಫಿಕ್ ಜಾಮ್ ಆಗಿದ್ದು ಕಿ.ಮೀ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮೃತ ಕಾಡಾನೆಯನ್ನು ರಸ್ತೆಯಿಂದ ತೆರವು ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next