Advertisement
ಜಿಲ್ಲೆಯ ವಿವಿಧ ಬಂದರು, ಕಟ್ಟಡ ನಿರ್ಮಾಣ ವಲಯ, ಫಿಶ್ಮೀಲ್ ಸಹಿತ ಹೊರ ರಾಜ್ಯದ ಕಾರ್ಮಿಕರು ಹೆಚ್ಚೆಚ್ಚು ಕಾರ್ಯನಿರ್ವಹಿಸುವ ಕಡೆಗಳಲ್ಲಿ ತೀವ್ರ ವಿಚಾರಣೆ ಹಾಗೂ ಮಾಹಿತಿ ಸಂಗ್ರಹ ಆರಂಭಿಸಿದ್ದಾರೆ. ಆನ್ಲೈನ್(ಗೂಗಲ್ಫಾರ್ಮೆಟ್) ಮೂಲಕ ಇಂತಹ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ರಾಜ್ಯದ ಕಾರ್ಮಿಕರ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತಿದೆ.
ಹೊರ ರಾಜ್ಯದ ಕಾರ್ಮಿಕರು ಎಷ್ಟಿದ್ದಾರೆ ಎಂಬ ನಿಖರ ಮಾಹಿತಿ ಕಾರ್ಮಿಕ ಇಲಾಖೆಯಲ್ಲಿ ಇಲ್ಲ. ಕಾರ್ಮಿಕ ಇಲಾಖೆ ಕೂಡ ಈ ಬಗ್ಗೆ ಹೆಚ್ಚು ಗಂಭೀರವಾದಂತಿಲ್ಲ. ಕರ್ನಾಟಕ ಹಾಗೂ ಜಿಲ್ಲೆಯ ಸಂಘಟಿತ, ಅಸಂಘಟಿತ ಕಾರ್ಮಿಕರ ಮಾತ್ರ ಮಾಹಿತಿ ಇಲಾಖೆ ಹೊಂದಿದೆ. ಆದರೆ ಹೊರ ರಾಜ್ಯದ ಎಷ್ಟು ಕಾರ್ಮಿಕರು ಜಿಲ್ಲೆಗೆ ಬರುತ್ತಿದ್ದಾರೆ. ಅದರಲ್ಲಿ ಎಷ್ಟು ಮಂದಿ ಮರಳಿದ್ದಾ, ಬಂದವರು ಎಲ್ಲಿದ್ದಾರೆ ಎಂಬ ಬಗ್ಗೆ ಪೂರ್ಣ ಮಾಹಿತಿ ಇಲಾಖೆಯಲ್ಲಿಲ್ಲ. ಸೇವಾ ಸಿಂಧು ಮೂಲಕ ಅಪ್ಲೋಡ್ ಮಾಡಲು ಸೂಚಿಸಿ ಸುಮ್ಮನಾಗಿದ್ದಾರೆ. ಆದರೆ ಅಪ್ಲೋಡ್ ಮಾಡಿದರ ಸಂಖ್ಯೆ ತೀರಾ ಕಡಿಮೆಯಿದೆ.
Related Articles
ಉಡುಪಿ: ಕಾರ್ಕಳದಲ್ಲಿ ನೆಲೆಸಿದ್ದ ಇನ್ನಿಬ್ಬರು ಅಕ್ರಮ ಬಾಂಗ್ಲಾ ವಲಸೆಗಾರರನ್ನು ಪೊಲೀಸರು ಬುಧವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಅವರನ್ನು ಕಾರ್ಕಳ ಪೊಲೀಸರು ತೀವ್ರ ವಿಚಾರಣೆ ನಡೆಯುತ್ತಿದ್ದು, ಗುರುವಾರ ಅಧಿಕೃತವಾಗಿ ಬಂಧಿಸುವ ಸಾಧ್ಯತೆ ಇದೆ. ಕಳೆದ ವಾರ ಮಲ್ಪೆ ಸಮೀಪದ ತೋನ್ಸೆ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲೇಯರನ್ನು ಬಂಧಿಸಲಾಗಿತ್ತು.
Advertisement
ಓರ್ವನನ್ನು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಜಿಲ್ಲೆಯಲ್ಲಿ ಇನ್ನೂ ಸಾಕಷ್ಟು ಮಂದಿ ಅಕ್ರಮ ವಲಸೆಗಾರರಿರುವ ಮಾಹಿತಿ ಬಂಧಿತರಿಂದ ಸಿಕ್ಕಿದ್ದು, ಅದರಂತೆ ತೀವ್ರ ತಪಾಸಣೆ ನಡೆಯುತ್ತಿದೆ. ಕಾರ್ಕಳದಲ್ಲಿ ವಶಕ್ಕೆ ಪಡೆದವರನ್ನು ಗುರುವಾರ ಮಹಜರು ನಡೆಸಿ ಬಂಧಿಸಲಾಗುವುದು ಎಂದು ಎಸ್ಪಿ ಡಾ| ಅರುಣ್ ಕೆ.ತಿಳಿಸಿದ್ದಾರೆ.
ರಾಷ್ಟ್ರೀಯ ಭದ್ರತೆ ಆತಂಕಕರ್ನಾಟಕದ ಕರಾವಳಿಯು ಒಂದರ್ಥದಲ್ಲಿ ದೇಶದ ಗಡಿಭಾಗವೂ ಹೌದು. ಹೀಗಾಗಿಯೇ ಕರಾವಳಿ ತೀರದಲ್ಲಿ ಕರಾವಳಿ ಕಾವಲು ಪಡೆ, ಅನಂತರ ಕೋಸ್ಟ್ಗಾರ್ಡ್(ರಕ್ಷಣ ಇಲಾಖೆ) ಭದ್ರತೆಯೂ ಇದೆ. ಆದರೆ ಮಲ್ಪೆ ಬಂದರಲಿನಲ್ಲಿ ಕನಿಷ್ಠ ಭದ್ರತೆಯೂ ಇಲ್ಲದೇ ಇರುವುದು ರಾಷ್ಟ್ರೀಯ ಭದ್ರತೆಯ ಬಗ್ಗೆಯೂ ಆತಂಕ ಸೃಷ್ಟಿಸಿದೆ. ಇಲ್ಲಿ ಯಾರು ಬೇಕಾದರೂ ಬರಬಹುದು ಹೋಗಬಹುದು. ಯಾವ ರಾಜ್ಯದ ಬೋಟ್ ಪ್ರವೇಶಿಸಿದರೂ ಪೂರ್ಣ ಪ್ರಮಾಣದಲ್ಲಿ ವಿಚಾರಣೆಯೇ ಇರುವುದಿಲ್ಲ. ಹೀಗಾಗಿ ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದಲೂ ಬಂದರಿನ ಭದ್ರತೆ ಮುಖ್ಯವಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಬಾಂಗ್ಲಾದ ಅಕ್ರಮ ವಲಸಿಗರು ಕಳೆದ 4-5 ವರ್ಷದಿಂದ ಜಿಲ್ಲೆಯಲ್ಲಿ ವಾಸವಿದ್ದು, ಇಲ್ಲಿನ ವಿಳಾಸದ ಪಾಸ್ಪೋರ್ಟ್ ಪಡೆದಿದ್ದಾರೆ ಎಂದಾದರೆ ಇದು ಗುಪ್ತಚಾರ ಇಲಾಖೆಯ ವೈಫಲ್ಯವೇ ಆಗಿರಬೇಕು ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಹೊರ ರಾಜ್ಯದ ಕಾರ್ಮಿಕರ ಮಾಹಿತಿಯನ್ನು ಗೂಗಲ್ ಫಾರ್ಮೆಟ್ ಮೂಲಕ ಕಳುಹಿಸುವಂತೆ ಈಗಾಗಲೇ ಎಲ್ಲ ಸಂಸ್ಥೆಗಳಿಗೆ ಸೂಚನೆ ನೀಡಿದ್ದೇವೆ. ಬಹುತೇಕ ಕಡೆಗಳಲ್ಲಿ 2-3 ತಿಂಗಳಿಗೆ ಕಾರ್ಮಿಕರು ಬದಲಾಗುತ್ತಿರುತ್ತಾರೆ. ಹೀಗಾಗಿ ನಿಖರ ಮಾಹಿತಿ ಕಲೆ ಹಾಕುವುದು ನಮಗೂ ಸವಾಲಾಗಿದೆ.
-ಮಿಥುನ್, ಎಸ್ಪಿ, ಕರಾವಳಿ ಕಾವಲು ಪಡೆ