Advertisement

Crime: ಚಾಕುವಿನಿಂದ ಇರಿದು ಪೌರಕಾರ್ಮಿಕನ ಹತ್ಯೆ

01:41 PM Nov 21, 2023 | Team Udayavani |

ಬೆಂಗಳೂರು: ಆಟೋ ಚಾಲಕ ಮತ್ತು ಪೌರ ಕಾರ್ಮಿಕನ ನಡುವೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಪಂತರಪಾಳ್ಯದಲ್ಲಿ ನಡೆದಿದೆ.

Advertisement

ಪಂತರಪಾಳ್ಯ ನಿವಾಸಿ ಭರತ್‌(26) ಕೊಲೆಯಾದ ಪೌರ ಕಾರ್ಮಿಕ.

ಕೃತ್ಯ ಎಸಗಿದ ಆಟೋ ಚಾಲಕ ಪ್ರಭು(38) ಎಂಬಾತನನ್ನು ಬಂಧಿಸಲಾಗಿದೆ. ಪಂತರಪಾಳ್ಯದ ನಿವಾಸಿ ಭರತ್‌, ಬಿಬಿಎಂಪಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ.

ಆರೋಪಿ ಪ್ರಭು, ಆಟೋ ಚಾಲಕನಾಗಿದ್ದಾನೆ. ಇಬ್ಬರು ಪರಿಚಯಸ್ಥರು. ಭಾನುವಾರ ರಾತ್ರಿ ಪಂತರಪಾಳ್ಯದಲ್ಲಿ ಇಬ್ಬರು ಮದ್ಯ ಸೇವಿಸಿದ್ದರಿಂದ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಉಂಟಾಗಿದೆ. ಅದು ವಿಕೋಪಕ್ಕೆ ಹೋದಾಗ ಪರಸ್ಪರ ಹೊಡೆದಾಡಿಕೊಂಡಿದ್ದು, ಕೋಪಗೊಂಡ ಆರೋಪಿ ಪ್ರಭು, ಚಾಕುವಿನಿಂದ ಭರತ್‌ನ ಕತ್ತು ಮತ್ತು ದೇಹದ ಇತರೆ ಭಾಗಗಳಿಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಗಾಯಗೊಂಡಿದ್ದ ಭರತ್‌ನನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಮಾರ್ಗ ಮಧ್ಯೆಯೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢ ಪಡಿಸಿದ್ದಾರೆ ಎಂದು ಮಾಹಿತಿ ನೀಡಿರುವುದಾಗಿ ಪೊಲೀಸರು ಹೇಳಿದರು.

ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಪ್ರಭುನನ್ನು ಬಂಧಿಸಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next