Advertisement

Crime: ಯುವಕನ ಕೊಂದು ಪೊದೆಗೆ ಎಸೆದ ದುಷ್ಕರ್ಮಿಗಳು

10:24 AM Dec 07, 2023 | Team Udayavani |

ಬೆಂಗಳೂರು: ಹಳೇ ದ್ವೇಷಕ್ಕೆ ಯುವಕ ನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ತಲಘಟ್ಟಪುರ ಠಾಣೆ ವ್ಯಾಪ್ತಿಯ ಮಲ್ಲಸಂದ್ರದಲ್ಲಿ ನಡೆದಿದೆ.

Advertisement

ಚಿಕ್ಕಲ್ಲಸಂದ್ರ ನಿವಾಸಿ ಶರತ್‌(30) ಕೊಲೆಯಾದವ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಶರತ್‌ನನ್ನು ಮಂಗಳವಾರ ರಾತ್ರಿ ಮಲ್ಲಸಂದ್ರ ಸಮೀಪದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದು, ಮೃತದೇಹವನ್ನು ಸಮೀಪದ ಪೊದೆ ಪಕ್ಕ ಎಸೆದು ಪರಾರಿಯಾಗಿದ್ದಾರೆ.

ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಕೊಲೆಯಾದವ ಶರತ್‌ ಎಂಬುದು ಗೊತ್ತಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

Advertisement

ಮತ್ತೂಂದೆಡೆ ಶರತ್‌ ವಿರುದ್ಧ ಈ ಹಿಂದೆ ಆರ್‌.ಆರ್‌.ನಗರ ಠಾಣೆ ವ್ಯಾಪ್ತಿಯಲ್ಲಿ ಎನ್‌ಡಿಪಿಎಸ್‌ ಅಡಿಯಲ್ಲಿ ಕೇಸ್‌ ದಾಖಲಾಗಿತ್ತು ಎಂದು ಹೇಳಲಾಗಿದೆ. ಈ ಬಗ್ಗೆಯೂ ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next