Advertisement

3 ಕಡೆ ಭೂಕುಸಿತ; ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

12:23 PM Jun 11, 2018 | Sharanya Alva |

ಹಾಸನ: ಭಾರೀ ಮಳೆಯಿಂದಾಗಿ ಹಾಸನ ಮಂಗಳೂರು ನಡುವೆ ಮೂರು ಕಡೆ ಭೂ ಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಮಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ.

Advertisement

ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ರೈಲು  ಹಾಸನದಲ್ಲೇ ನಿಲ್ಲಿಸಲಾಗಿದ್ದು, ಪ್ರಯಾಣಿಕರಿಗೆ ಟಿಕೆಟ್ ಹಣ ಮರುಪಾವತಿ ಮಾಡಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಭಾರೀ ಮಳೆಯಿಂದಾಗಿ ಎಡಕುಮೇರಿ ಮೈಲು 218 ಸೇರಿದಂತೆ ಮೂರು ಸ್ಥಳಗಳಲ್ಲಿ ಭೂ ಕುಸಿತ ಸಂಭವಿಸಿದೆ. ಇದನ್ನು ತೆರವುಗೊಳಿಸಿದ ಬಳಿಕ ಮತ್ತೆ ರೈಲು ಸಂಚಾರ ಆರಂಭವಾಗಲಿದೆ ಎಂದು ಮೂಲಗಳು ಹೇಳಿವೆ.

ರೈಲು ಸಂಚಾರ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಹಾಸನದಿಂದ ಮತ್ತೆ ಬಸ್ ಮೂಲಕ ಮಂಗಳೂರಿಗೆ ಆಗಮಿಸಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next