Advertisement

New Year: ಪೊಲೀಸ್‌ ಸರ್ಪಗಾವಲಿನಲ್ಲಿ ಹೊಸ ವರ್ಷ

01:54 PM Dec 27, 2023 | Team Udayavani |

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರದ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ, ಕೋರಮಂಗಲ ಸೇರಿ ಎಲ್ಲೆಡೆ ಬಿಗಿ ಭದ್ರತೆಗೆ 7 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ ಜತೆಗೆ ಮಹಿಳೆಯರ ಸುರಕ್ಷತೆಗೆ ಮಹಿಳಾ ಸೇಫ್ಟಿ ಐಲ್ಯಾಂಡ್‌ ಗಳನ್ನು ತೆರೆಯಲಾಗಿದೆ.

Advertisement

ಇದೇ ಮೊದಲ ಬಾರಿಗೆ ಡಿ.31ರ ತಡರಾತ್ರಿ 11 ಗಂಟೆಯಿಂದ ಜನವರಿ 1ರ ನಸುಕಿನ 2 ಗಂಟೆ ವರೆಗೂ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ಬಂದ್‌ ಆಗಲಿದೆ. ಅಲ್ಲಿಂದ ಪ್ರವೇಶವೂ ಇಲ್ಲ, ನಿರ್ಗಮನ ವೂ ಇಲ್ಲ. ತಡರಾತ್ರಿ 1 ಗಂಟೆವರೆಗೆ ಮಾತ್ರ ನಗರ ದಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡಲಾಗಿದೆ. ಈ ಕುರಿತು ಮಂಗಳವಾರ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಮಾಹಿತಿ ನೀಡಿದರು.

ಪ್ರತಿ ವರ್ಷದಂತೆ ಹೊಸ ವರ್ಷಾಚರಣೆಗೆ ಎಲ್ಲೆಡೆ ಅವಕಾಶವಿದ್ದು, ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ, ರೆಸಿಡೆನ್ಸಿ ರಸ್ತೆ, ಸೆಂಟ್‌ ಮಾರ್ಕ್‌Õ ರಸ್ತೆ, ಕಬ್ಬನ್‌ ಪಾರ್ಕ್‌, ಟ್ರಿನಿಟಿ ಸರ್ಕಲ್‌,  ಫೀನಿಕ್ಸ್‌ ಮಾಲ್‌, ಕೋರ ಮಂಗಲ, ಇಂದಿರಾ ನಗರ 100 ಅಡಿ ರಸ್ತೆ, ಪ್ರಮುಖ ಸ್ಟಾರ್‌ ಹೋಟೆಲ್‌ಗ‌ಳು, ಪಬ್‌ಗಳು, ಕ್ಲಬ್‌ ಗಳು ಮುಂತಾದ ಸ್ಥಳಗಳಲ್ಲಿ ಜನಸಂದಣಿ ನಿಯಂತ್ರಿಸಲು ಬಿಗಿ ಪೊಲೀಸರ ನಿಯೋಜಿಸಲಾಗಿದೆ.

ಪೊಲೀಸ್‌ ಸರ್ಪಗಾವಲು: ವಿಶೇಷವಾಗಿ ಬ್ರಿಗೇಡ್‌ ರಸ್ತೆ, ಎಂ.ಜಿ. ರಸ್ತೆ, ಒಪೆರಾ ಜಂಕ್ಷನ್‌, ರಿಚ್ಮಂಡ್‌ ರಸ್ತೆ, ರೆಸಿಡೆನ್ಸಿ ರಸ್ತೆ ವ್ಯಾಪ್ತಿಯಲ್ಲಿ ನಾಲ್ವರು ಡಿಸಿಪಿ ನೇತೃತ್ವದಲ್ಲಿ 10 ಎಸಿಪಿ, 30 ಪಿಐ ಸೇರಿ ಒಟ್ಟು 3 ಸಾವಿರ ಮಂದಿ ಪೊಲೀಸರು ಭದ್ರತೆ ನಿರ್ವಹಿಸಲಿದ್ದಾರೆ. ಇನ್ನು ಫೀನಿಕ್ಸ್‌ ಮಾಲ್‌, ಮಾಲ್‌ ಆಫ್ ಏಷಿಯಾ ಹಾಗೂ ನಗರದ ಇತರೆ ಪ್ರಮುಖ ಸ್ಥಳಗಳಲ್ಲಿ ನಡೆಯಲಿರುವ ಹೊಸ ವರ್ಷಾಚರಣೆಗೆ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗುತ್ತದೆ. ಕೋರಮಂಗಲ, ಇಂದಿರಾನಗರ, ಮಾರತ್‌ಹಳ್ಳಿ, ಎಚ್‌ ಆರ್‌ಬಿಆರ್‌ ಲೇಔಟ್‌, ಏರ್‌ಪೋರ್ಟ್‌ ರಸ್ತೆ, ವೈಟ್‌ ಫೀಲ್ಡ್‌ ಪ್ರದೇಶಗಳಲ್ಲಿ ನಡೆಯಲಿರುವ ಹೊಸ ವರ್ಷಾಚರಣೆಯ ಬಂದೋಬಸ್ತ್ಗೆ ನಾಲ್ವರು ಡಿಸಿಪಿ, 10 ಎಸಿಪಿ, 25 ಪಿಐ ಸೇರಿ 2500 ಮಂದಿ ನಿಯೋಜಿಸಲಾಗಿದೆ. ಜನಸಂದಣಿ ಪ್ರದೇಶಗಳಲ್ಲಿ ವೀಕ್ಷಣಾ ಗೋಪುರಗಳು ನಿರ್ಮಿಸಿದ್ದು, ಈ ಸಿಬ್ಬಂದಿಗೆ ಬೈನಾಕುಲರ್‌ ನೀಡಲಾಗುತ್ತದೆ. ಜತೆಗೆ ಎಲ್ಲೆಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ, ಅವುಗಳ ನಿರ್ವಹಣೆಗೆ ಮೊಬೈಲ್‌ ಕಮಾಂಡ್‌ ವಾಹನ ಸ್ಥಳದಲ್ಲಿ ಇರಲಿದೆ. ಇದರೊಂದಿಗೆ ಡ್ರೋಣ್‌ ಕ್ಯಾಮೆರಾಗಳು ಕಾರ್ಯನಿರ್ವಹಿಸಲಿವೆ. ಪ್ರಮುಖ ಸ್ಥಳಗಳಲ್ಲಿ ಶ್ವಾನದಳ ಮತ್ತು 10 ಎ.ಎಸ್‌ ಚೆಕ್‌ ತಂಡಗಳಿಂದ ತಪಾಸಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಸತೀಶ್‌ಕುಮಾರ್‌, ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬ ಇದ್ದರು. ಮಹಿಳೆಯರ ಸುರಕ್ಷತೆಗಾಗಿ ಬಿ.ದಯಾನಂದ ಹೇಳಿದರು.

ಸೇಫ್ಟಿ ಐಲ್ಯಾಂಡ್‌ ಸ್ಥಾಪನೆ: ಮಹಿಳೆಯರ ಸುರಕ್ಷತೆಗಾಗಿ ಪ್ರಮುಖ ಸ್ಥಳಗಳಲ್ಲಿ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿ ಇರುವ ಮಹಿಳಾ ಸುರಕ್ಷತಾ ಸ್ಥಳಗಳನ್ನು (ಮಹಿಳಾ ಸೇಫ್ಟಿ ಐಲ್ಯಾಂಡ್‌) ತೆರೆಯಲಾಗಿದೆ. ಜತೆಗೆ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್‌ ಕಿಯೋಸ್ಕ್(ದೂರು ಕೇಂದ್ರ)ಗಳು ತೆರೆದಿದ್ದು, ಮಕ್ಕಳು ಕಾಣಿಯಾದಲ್ಲಿ ಅಥವಾ ಬೇರೆ ಯಾವುದೇ ತೊಂದರೆ ಹಾಗೂ ಕಳವು ಸಂಬಂಧ ತುರ್ತು ಸಂದರ್ಭಗಳಲ್ಲಿ ಈ ಕೇಂದ್ರಕ್ಕೆ ಬಂದು ದೂರು ನೀಡಬಹುದು. ಮಹಿಳೆಯರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಆಯ್ದ ಸ್ಥಳಗಳಲ್ಲಿ ಪಿಕ್‌ ಅಪ್‌ ಪಾಯಿಂಟ್‌ ನಿರ್ಮಿಸ ಲಾಗಿದೆ. ತುರ್ತು ಸಂದರ್ಭದಲ್ಲಿ 112ಗೆ ಕರೆ ಮಾಡಿ ದೂರು ನೀಡಬಹುದು. ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಸೇರಿ ನಗರದ ಆಯ್ದ ಸ್ಥಳಗಳಲ್ಲಿ ವೈದ್ಯರು, ಬೆಸ್ಕಾಂ ಸಿಬ್ಬಂದಿ ಹಾಗೂ ಇತರೆ ಸ್ಥಳೀಯ ಆಡಳಿತ ಸಂಸ್ಥೆಗಳ ಅಧಿಕಾರಿ- ಸಿಬ್ಬಂದಿಯೂ ಕಾರ್ಯನಿರ್ವಹಿಸ ಲಿದ್ದಾರೆ ಎಂದು ಪೊಲೀಸ್‌ ಆಯುಕ್ತರು ಹೇಳಿದರು.

Advertisement

11 ಗಂಟೆವರೆಗೆ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ : ತಡರಾತ್ರಿ 11 ಗಂಟೆವರೆಗೆ ಮಾತ್ರ ಮದ್ಯದ ಮಳಿಗೆಯಲ್ಲಿ ವ್ಯವಹಾರಕ್ಕೆ ಅವಕಾಶ ನೀಡಿದ್ದು, ಇನ್ನು ಸರ್ಕಾರದ ನಿಯಮದ ಪ್ರಕಾರ ತಡರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ ಇದೆ. ಜತೆಗೆ ಕ್ಲಬ್‌, ಪಬ್‌ ಮತ್ತು ರೆಸ್ಟೋರೆಂಟ್‌ ಗಳು ಹೊಸ ವರ್ಷಾಚರಣೆ ನಿಮಿತ್ತ ಸದಸ್ಯರು ಹಾಗೂ ಅತಿಥಿಗಳಿಗೆ ಔತಣ ಕೂಟ-ಇವೆಂಟ್‌ಗಳಿಗೆ ಅನುಮತಿ ನೀಡುವಾಗ ಅಗತ್ಯಕ್ಕಿಂತ ಹೆಚ್ಚು ಪಾಸ್‌ಗೆ ಅವಕಾಶ ನೀಡದಂತೆ ಸೂಚಿಸಲಾಗಿದೆ. ಈ ಸ್ಥಳಗಳಿಗೆ ಬರುವ ಗ್ರಾಹಕರ ಗುರುತು ಪತ್ತೆ ಹಚ್ಚಲು, ಗ್ರಾಹಕರ ಮೊಬೈಲ್‌ ನಂಬರ್‌ ಅಥವಾ ಯಾವುದಾದರೂ ಗುರುತಿನ ಚೀಟಿ ಪಡೆಯಲು ನಿರ್ದೇಶಿಸಲಾಗಿದೆ ಎಂದು ಪೊಲೀಸ್‌ ಆಯುಕ್ತರು ಹೇಳಿದರು.

ರೇವ್‌ ಪಾರ್ಟಿಗಳ ಮೇಲೆ ಖಾಕಿ ಹದ್ದಿನಕಣ್ಣು : ಹೊಸ ವರ್ಷಾಚರಣೆ ಸಂದರ್ಭದಲ್ಲಿ ಡ್ರಗ್ಸ್‌ ರೇವ್‌ ಪಾರ್ಟಿಗಳು ಆಗುವುದನ್ನು ನಿಯಂತ್ರಿಸಲಾಗುತ್ತದೆ. ನಗರದ ಎಲ್ಲಾ ಡಿಸಿಪಿಗಳು, ಸಿಸಿಬಿ ಅಧಿಕಾರಿಗಳು ಡ್ರಗ್ಸ್‌ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಿದ್ದಾರೆ. ಕಳೆದ 26 ದಿನಗಳಲ್ಲಿ ನಗರದಲ್ಲಿ 9 ಮಂದಿ ವಿದೇಶಿ ಪೆಡ್ಲರ್‌ ಸೇರಿ 56 ಮಂದಿ ಬಂಧಿಸಲಾಗಿದೆ. ಅವರಿಂದ 99.85 ಕೆ.ಜಿ. ಡ್ರಗ್ಸ್‌ ವಶಕ್ಕೆ ಪಡೆಯಲಾಗಿದೆ. ಹೊಸ ವರ್ಷದ ಸಂದರ್ಭದಲ್ಲಿ ಅಕ್ರಮ ಮದ್ಯ ಸಂಗ್ರಹಿಸುವ ವ್ಯಕ್ತಿಗಳ ವಿರುದ್ಧ ಅಬಕಾರಿ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಲಿದ್ದಾರೆ ಎಂದು ಪೊಲೀಸ್‌ ಆಯುಕ್ತರು ಹೇಳಿದರು.

ಭದ್ರತೆಗೆ ಕೆಎಸ್‌ಆರ್‌ಪಿ, ಸಿಎಆರ್‌ ತುಕಡಿ ನೇಮಕ : ನಗರಾದ್ಯಂತ ಇಬ್ಬರು ಹೆಚ್ಚುವರಿ ಪೊಲೀಸ್‌ ಆಯುಕ್ತರು, ಒಬ್ಬರು ಜಂಟಿ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ 15 ಮಂದಿ ಡಿಸಿಪಿ, 45 ಎಸಿಪಿ, 160 ಇನ್‌ಸ್ಪೆಕ್ಟರ್‌, 600 ಪಿಎಸ್‌ಐ, 600 ಎಎಸ್‌ಐ, 1800 ಹೆಡ್‌ ಕಾನ್‌ಸ್ಟೇಬಲ್‌ಗ‌ಳು, 5200 ಕಾನ್‌ಸ್ಟೇಬಲ್‌ಗ‌ಳು, ಜತೆಗೆ ಕೆಎಸ್‌ ಆರ್‌ಪಿ, ಸಿಎಆರ್‌ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇದರೊಂದಿಗೆ ಕೆಲ ಪೊಲೀ ಸರು ಮಫ್ತಿಯಲ್ಲಿ ಗಸ್ತು ತಿರುಗಲಿದ್ದಾರೆ ಎಂದು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಹೇಳಿದರು.

31ರ ರಾತ್ರಿ 11ಗಂಟೆಯಿಂದ 2ರವರೆಗೆ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ಬಂದ್‌ : ಕಳೆದ ವರ್ಷಾಚರಣೆ ಸಂದರ್ಭದಲ್ಲಿ ಉಂಟಾದ ಸಮಸ್ಯೆಯಿಂದ ಈ ವರ್ಷ ಸಾರ್ವಜನಿಕರ ಸುರಕ್ಷತೆಗಾಗಿ ಡಿ.31ರ ತಡರಾತ್ರಿ 11 ಗಂಟೆಯಿಂದ ಜ.1ರ ನಸುಕಿನ 2 ಗಂಟೆವರೆಗೆ ಎಂ.ಜಿ.ರಸ್ತೆಯ ಮೆಟ್ರೋ ನಿಲ್ದಾಣದ ಮೂಲಕ ಪ್ರಯಾಣಿಕರು ನಿರ್ಗಮಿಸಲು ಅವಕಾಶ ಇಲ್ಲ. ಹೊಸ ವರ್ಷಾಚರಣೆ ಮುಗಿದ ಬಳಿಕ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ ಬದಲಿಗೆ ಟ್ರಿನಿಟಿ ಸರ್ಕಲ್‌ ಹಾಗೂ ಕಬ್ಬನ್‌ ಪಾರ್ಕ್‌ ಮೆಟ್ರೋ ನಿಲ್ದಾಣದ ಮೂಲಕ ನಿರ್ಗಮಿಸಬೇಕು ಎಂದು ನಗರ ಪೊಲೀಸ್‌ ಆಯುಕ್ತ ಮಹಿಳೆಯರ ಸುರಕ್ಷತೆಗಾಗಿ ಬಿ.ದಯಾನಂದ ಹೇಳಿದರು.

ಜನಸಂದಣಿ ಸ್ಥಳಗಳಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ :

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕೆಲವು ಮುಂಜಾಗ್ರತೆ ಕ್ರಮ ಕೈಗೊಳ್ಳಲು ಮುಂದಾಗಿದೆ.

ಗೃಹ ಸಚಿವ ಜಿ.ಪರಮೇಶ್ವರ್‌ ಅವರ ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ ಕೆಲವು ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದ್ದು, ಹೆಚ್ಚಿನ ಜನರು ಸೇರುವ ಸ್ಥಳಗಳಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪಿಸುವುದರ ಜೊತೆಗೆ ಲಭ್ಯವಿರುವ ಆ್ಯಂಬುಲೆನ್ಸ್‌ಗಳನ್ನೂ ಸನ್ನದ್ಧ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ಪಾಲಿಕೆ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಗಳು ಈಗಾಗಲೇ ಸಿದ್ಧತೆ ನಡೆಸಿದ್ದಾರೆ.

ಹೆಚ್ಚಿನ ಸಂಖ್ಯೆಯ ಜನರು ಸಂಚರಿಸುವ ಮಾರ್ಗ ಗಳು, ಸ್ಥಳಗಳಲ್ಲಿರುವ ಬೀದಿ ದೀಪಗಳನ್ನು ಸುಸ್ಥಿತಿಯಲ್ಲಿಡಲಾಗುವುದು. ಹೆಚ್ಚುವರಿಯಾಗಿ ಫೆಡ್‌ಲೈಟ್‌ಗಳನ್ನು ಅಳವಡಿಸಲಾ ಗುವುದು. ರಸ್ತೆ ರಿಪೇರಿ ಕಾಮಗಾರಿಯ ನಡೆಯುತ್ತಿ ರುವ ಸ್ಥಳಗಳಲ್ಲಿ ಸೂಕ್ತ ರೀತಿಯಲ್ಲಿ ಬ್ಯಾರಿಕೇಡ್‌ ವ್ಯವಸ್ಥೆ, ರಿಫ್ಲೆಕ್ಟಿಂಗ್‌ ಸ್ಟಿಕ್ಕರ್ಸ್‌, ಸೂಚನಾ ಫಲಕಗಳನ್ನು ಅಳವಡಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಜತೆಗೆ ರಸ್ತೆ ಗುಂಡಿಗಳನ್ನು ಮುಚ್ಚುವುದು, ರಸ್ತೆ ಉಬ್ಬುಗಳು ಸ್ಪಷ್ಟವಾಗಿ ವಾಹನ ಚಾಲಕರಿಗೆ ಕಾಣುವಂತೆ ಅಗತ್ಯ ಕ್ರಮ ವಹಿಸಲಾಗುವುದು. ಎಂ.ಜಿ.ರಸ್ತೆ, ಬ್ರಿಗೈಡ್‌ ರಸ್ತೆ, ರೆಸಿಡೆನ್ಸಿ ರಸ್ತೆ, ಸೇಂಟ್‌ ಮಾರ್ಕ್‌ ರಸ್ತೆ, ಕಬ್ಬನ್‌ ಪಾರ್ಕ್‌, ಟ್ರಿನಿಟಿ ಸರ್ಕಲ್‌, ಹಲಸೂರು ಕೆರೆ, ಫೀನಿಕ್ಸ್‌ ಮಾಲ್‌, ಕೋರಮಂಗಲ, ಸ್ಟಾರ್‌ ಹೋಟೆಲ್‌ಗ‌ಳು, ಕ್ಲಬ್‌ ಇತರೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಸೇರಲಿದ್ದು, ಜನರ ನಿಯಂತ್ರಣಕ್ಕಾಗಿ ಬ್ಯಾರಿಕೇಡ್‌ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next