Advertisement

ವಾಹನಗಳ ವಿರುದ್ದ ದಂಡ ಪ್ರಯೋಗ

04:06 PM Jul 01, 2021 | Team Udayavani |

ಬೆಂಗಳೂರು: ಸಂಚಾರ ಪೊಲೀಸರು ಮತ್ತು ಸಾರಿಗೆ ಇಲಾಖೆಯ ಜಂಟಿ ಕಾರ್ಯಾಚರಣೆ ನಡೆಸಿ ದೋಷ ಪೂರಿತ ನಂಬರ್‌ ಪ್ಲೇಟ್‌ ಹೊಂದಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿದರು.

Advertisement

ಸಂಚಾರ ವಿಭಾಗ ಜಂಟಿ ಪೊಲೀಸ್‌ ಆಯುಕ್ತ ಬಿ.ಆರ್‌.ರವಿಕಾಂತೇಗೌಡ, ಸಂಚಾರ ಪೂರ್ವ ವಿಭಾಗ ಡಿಸಿಪಿಶಾಂತರಾಜು ಮತ್ತು ಸಾರಿಗೆ ಇಲಾಖೆ ಎನ್ಫೋರ್ಸ್‌ಮೆಂಟ್‌ ವಿಭಾಗದ ಹೆಚ್ಚುವರಿ ಆಯುಕ್ತ ನರೇಂದ್ರ ಹೊಳ್ಕರ್‌ ಅವರನೇತೃತ್ವದಲ್ಲಿ ವಿಧಾನಸೌಧ ಮತ್ತು ವಿಕಾಸಸೌಧ ಸಮೀಪದಲ್ಲಿ ಬುಧವಾರ ಬೆಳಗ್ಗೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.

ಈ ವೇಳೆ ಸುಮಾರು 100ಕ್ಕೂ ಹೆಚ್ಚುವಾಹನಗಳಿಗೆ ದಂಡ ವಿಧಿಸಿ ನೊಟೀಸ್‌ ನೀಡಲಾಗಿದೆ.ಸರ್ಕಾರದ ವಾಹನಗಳ ಹೊರತು ಪಡಿಸಿ ಖಾಸಗಿ ವಾಹನಗಳ ನಂಬರ್‌ ಪ್ಲೇಟ್‌ ಮೇಲೆ ಯಾವುದೇ ಹೆಸರು, ಸಂಘ,ಸಂಸ್ಥೆಗಳ ಹೆಸರು ಬರೆಯುವಂತಿಲ್ಲ. ಇತ್ತೀಚೆಗೆ ಈ ಬಗ್ಗೆದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು ಎಂದು ಸಂಚಾರ ಪೊಲೀಸರುಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next