Advertisement

ಮಕ್ಕಳ ಆರೋಗ್ಯದತ್ತ  ಕಾಳಜಿ ವಹಿಸಿ

05:46 PM Jul 04, 2021 | Team Udayavani |

ದೊಡ್ಡಬಳ್ಳಾಪುರ: ಕೋವಿಡ್‌-19 3ನೇಅಲೆ ಮಕ್ಕಳ ಮೇಲೆ ತೀವ್ರ ಪರಿಣಾಮಬೀರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ಕೊವಿಡ್‌ ಸೋಂಕು ಹರಡದಂತೆ ಎಚ್ಚರ  ವಹಿಸಬೇಕಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದಸದಸ್ಯ ಡಾ.ಆರ್‌.ಜಿ.ಆನಂದ್‌ ತಿಳಿಸಿದರು.

Advertisement

ನಗರದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಹಾಲುಣಿಸುವ ತಾಯಂದಿರಿಗೆ ವಿಶೇಷ ಲಸಿಕೆ ಅಭಿಯಾನಕ್ಕೆ ಚಾಲನೆನೀಡಿ ಮಾತನಾಡಿ, ಕೋವಿಡ್‌-19 ಮಕ್ಕಳಿಗೆ ಸೋಂಕು ಹರಡದಂತೆ ಮುನ್ನೆಚ್ಚರಿಕೆಕ್ರಮಗಳನ್ನು ಕೈಗೊಳ್ಳಬೇಕು. ಅಪೌಷ್ಟಿಕತೆಇರುವ ಮಕ್ಕಳನ್ನು ಗುರುತಿಸಿ, ಅವರಿಗೆಸೂಕ್ತ ಚಿಕಿತ್ಸೆ ನೀಡಬೇಕಿದೆ.

ಮಕ್ಕಳಿಗೆಪ್ರತ್ಯೇಕ ಕೋವಿಡ್‌ ಕೇರ್‌ ಸೆಂಟರ್‌ಗಳನ್ನುತೆರೆದು, ಮಕ್ಕಳ ತಜ್ಞರನ್ನು ಗುರುತಿಸಿ,ಕಾರ್ಯನಿರ್ವಹಿಸಲು ಸನ್ನದ್ಧರಾಗಬೇಕಿದೆಎಂದು ಅಧಿಕಾರಿಗಳಿಗೆ ಸೂಚಿಸಿದರು. ಈವೇಳೆ ಅಪೌಷ್ಟಿಕತೆ ಇರುವ ಮಕ್ಕಳಿಗೆ ಪೌಷ್ಟಿಕಆಹಾರದ ಕಿಟ್‌ಗಳನ್ನು ವಿತರಿಸಲಾ ಯಿತು.ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಸಿಡಿಪಿಒ ಅನಿತಾಲಕ್ಷಿ ¾à ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next