Advertisement
ದಾವಣಗೆರೆಯಿಂದ ಶನಿವಾರ ಬೆಳಗ್ಗೆ 50ಕ್ಕೂ ಹೆಚ್ಚು ಬಸ್ಗಳಲ್ಲಿ ಬೆಂಗಳೂರಿಗೆ ತೆರಳಿ, ಪ್ರದೇಶ ಕಾಂಗ್ರೆಸ್ ಸಮಿತಿಅಧ್ಯಕ್ಷ ಡಾ| ಜಿ. ಪರಮೇಶ್ವರ್ ಮತ್ತು ಇತರೆ ಮುಖಂಡರ ಭೇಟಿ ಮಾಡಿ, ಶಾಮನೂರು ಶಿವಶಂಕರಪ್ಪರಿಗೆ ಸಚಿವ ಸ್ಥಾನ ನೀಡದೇ ಇರುವುದನ್ನು ಖಂಡಿಸಿ, ಡಾ| ಜಿ. ಪರಮೇಶ್ವರ್ ಗೆ ನೇರವಾಗಿ ಸಾಮೂಹಿಕವಾಗಿ ರಾಜೀನಾಮೆ
ಸಲ್ಲಿಸಲಿದ್ದಾರೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಮೊದಲ ಸಚಿವ ಸಂಪುಟದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ
ನವರಿಗೆ ಅವಕಾಶ ನೀಡದೇ ಇರುವುದು ತೀರಾ ಬೇಸರ ತರಿಸಿದೆ. ಹಲವು ದಶಕಗಳ ಕಾಲ ಕಾಂಗ್ರೆಸ್ನ ಖಾಯಂ
ಖಜಾಂಚಿಯಾಗಿ ಪಕ್ಷದ ಬೆಳವಣಿಗೆಗೆ ಶ್ರಮಿಸಿರುವ ಹಿರಿಯ ಮುತ್ಸದ್ದಿಗೆ ಸಚಿವ ಸ್ಥಾನ ನೀಡದೇ ಇರುವುದು
ಇಡೀ ಕಾಂಗ್ರೆಸ್ ಕಾರ್ಯಕರ್ತರಿಗೆ ಅಪಾರ ನೋವುಂಟು ಮಾಡಿದೆ ಎಂದು ತಿಳಿಸಿದರು. ಅವಿಭಜಿತ ಚಿತ್ರದುರ್ಗ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರಾಗಿ, ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದಿಂದ ಸತತ
ಮೂರು ಬಾರಿ ಸೇರಿ ಒಟ್ಟು ಐದು ಬಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ, ತೋಟಗಾರಿಕೆ ಮತ್ತು ಕೃಷಿ ಉತ್ಪನ್ನ
ಮಾರುಕಟ್ಟೆ ಸಚಿವರಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. 87ರ ವಯಸ್ಸಿನಲ್ಲೂ ಕಿರಿಯರು ನಾಚುವಂತೆ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ದೇಶಕ್ಕೆ ಮಾದರಿ ಆಗುವಂತೆ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆನ್ಲೈನ್ ವ್ಯವಸ್ಥೆ ಜಾರಿ ಮಾಡಿದ ಕೀರ್ತಿಯೂ ಅವರದ್ದು. ಅಂತಹವರಿಗೇ ಸಚಿವ ಸ್ಥಾನ ನೀಡದೇ ಇರುವುದು ಅತ್ಯಂತ ಖಂಡನೀಯ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
Related Articles
ಸಚಿವ ಸಂಪುಟ ವಿಸ್ತರಣೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸ್ಥಾನ ನೀಡಲೇಬೇಕು. ಇಲ್ಲದಿದ್ದಲ್ಲಿ
ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳಲಿದೆ ಎಂದರು.
Advertisement
ಮೇಯರ್ ಶೋಭಾ ಪಲ್ಲಾಗಟ್ಟೆ, ಮುದೇಗೌಡ್ರ ಗಿರೀಶ್, ದಿನೇಶ್ ಕೆ. ಶೆಟ್ಟಿ, ಕೆ.ಜಿ. ಶಿವಕುಮಾರ್,ಎ.ನಾಗರಾಜ್, ಅಶ್ವಿನಿ ಪ್ರಶಾಂತ್, ಮಹಾನಗರ ಪಾಲಿಕೆ, ಜಿಲ್ಲಾ, ತಾಲೂಕು ಪಂಚಾಯತಿ ಕಾಂಗ್ರೆಸ್ ಸದಸ್ಯರು,
ಇತರೆ ಮುಖಂಡರು ಇದ್ದರು.