Advertisement

ಬೆಂಗಳೂರು; ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದು ಮೂವರು ಟೆಕ್ಕಿಗಳು ಸಾವು

08:47 AM May 07, 2019 | Team Udayavani |

ಬೆಂಗಳೂರು: ವೇಗವಾಗಿ ಬೈಕ್ ಚಲಾಯಿಸಿದ ಪರಿಣಾಮ ರಸ್ತೆ ಡಿವೈಡರ್(ವಿಭಜಕ)ಗೆ ಹೊಡೆದ ಪರಿಣಾಮ ಮೂವರು ಟೆಕ್ಕಿಗಳು ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

Advertisement

ಹೆಲ್ಮೆಟ್ ಧರಿಸದೆ ಇದ್ದ ಕಾರಣ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಾಗ ತಲೆಗೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಅನಿಲ್, ಕಾರ್ತಿಕ್ ಮತ್ತು ಶ್ರೀನಾಥ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಗುರುವಾರ ಅನಿಲ್ ಎಂಬಾತನ ನಿಶ್ಚಿತಾರ್ಥ ಇದ್ದಿದ್ದು, ಅನಿಲ್ ಮನೆಯಲ್ಲಿ ರೋಧನ ಮುಗಿಲು ಮುಟ್ಟಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next