Advertisement

ಬೆಂಗಳೂರು ಐಐಎಸ್ಸಿ ಲ್ಯಾಬ್ ನಲ್ಲಿ ಸ್ಫೋಟ; ಯುವ ವಿಜ್ಞಾನಿ ಸಾವು

07:04 PM Dec 05, 2018 | Team Udayavani |

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ ಸಿ)ಯ ಪ್ರಯೋಗಾಲಯದಲ್ಲಿ ಹೈಡ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಏರೋಸ್ಪೇಸ್ ವಿಭಾಗದ ಯುವ ವಿಜ್ಞಾನಿಯೊಬ್ಬರು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

Advertisement

ಮಧ್ಯಾಹ್ನ ಪ್ರಯೋಗಾಲಯದಲ್ಲಿ ಕಾರ್ಯನಿರತರಾಗಿದ್ದ ವೇಳೆಯಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹೈದರಾಬಾದ್ ಮೂಲದ ಮನೋಜ್ ಕುಮಾರ್ ಸಾವಿಗೀಡಾಗಿದ್ದಾರೆ. ಅಲ್ಲದೇ ಕಾರ್ತಿಕ್, ನರೇಶ್ ಮತ್ತು ಅತುಲ್ಯ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next