Advertisement

ಹತ್ಯೆಯಾದ ಬಂಗಾರಪೇಟೆ ತಹಶೀಲ್ದಾರ್ ಕುಟುಂಬಕ್ಕೆ 25ಲಕ್ಷ. ರೂ. ಪರಿಹಾರಕ್ಕೆ ಸಿಎಂ ಸೂಚನೆ

08:01 PM Jul 09, 2020 | sudhir |

ಬೆಂಗಳೂರು : ಬಂಗಾರಪೇಟೆ ತಹಶೀಲ್ದಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಂಬನಿ ಮಿಡಿದಿದ್ದಾರೆ.

Advertisement

ಬಂಗಾರಪೇಟೆ ತಾಲ್ಲೂಕಿನ ಕಳವಂಚಿ ಗ್ರಾಮದ ಜಮೀನಿನ ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ತಹಶೀಲ್ದಾರರಾದ ಶ್ರೀ ಚಂದ್ರಮೌಳೇಶ್ವರ್ ಇವರು ಸರ್ವೇ ಕಾರ್ಯಕ್ಕೆ ಹೋದ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಅವರನ್ನು ಚಾಕುವಿನಿಂದ ಇರಿದು ಸಾಯಿಸಿರುವುದು ಬಹಳ ವಿಷಾದನೀಯ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮತ್ತು ಅವರ ಕುಟುಂಬಕ್ಕೆ ಆದ ಹಾನಿ ಮತ್ತು ದು:ಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ ಮುಖ್ಯಮಂತ್ರಿ.

ಮೃತರ ಅಂತ್ಯಕ್ರೀಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಸೂಚಿಸಿದ್ದಾರೆ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರೂ.25.00 ಲಕ್ಷಗಳ ಪರಿಹಾರವನ್ನು ಜೊತೆಗೆ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿಯನ್ನು ನೀಡಲು ಸಹ ಸೂಚನೆಯನ್ನು ನೀಡಿದ್ದೇನೆ ಎಂದು ತಿಳಿಸಿದರು.

ಹತ್ಯೆ ನಡೆಸಿದ ಆರೋಪಿಗಳ ಮೇಲೆ ಕಾನೂನು ಅಡಿ ನಿರ್ದಾಕ್ಷೀಣವಾಗಿ ಕ್ರಮ ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚರಿಸುತ್ತೇನೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next