Advertisement
ಸೊರಬದ “ಬಂಗಾರಧಾಮ’ದಲ್ಲಿ ಮಂಗಳವಾರ ಮಾಜಿ ಮುಖ್ಯಮಂತ್ರಿ ದಿ| ಎಸ್.ಬಂಗಾರಪ್ಪ ಅವರ 12ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ವಿಚಾರ ವೇದಿಕೆ, ಬಂಗಾರಪ್ಪ ಅಭಿಮಾನಿ ಬಳಗ ಹಾಗೂ ಬಂಗಾರಪ್ಪ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ “ಬಂಗಾರಪ್ಪ ಸವಿನೆನಪು” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಂದೆ-ತಾಯಿಯವರ ಬಗ್ಗೆ ಅಪಾರ ಕಾಳಜಿ ಹೊಂದಿ ಸ್ಮಾರಕ ನಿರ್ಮಿಸಿರುವ ಸಚಿವ ಮಧು ಬಂಗಾರಪ್ಪನವರ ಕಾರ್ಯ ಅತ್ಯಂತ ಶ್ಲಾಘನೀಯ ಎಂದರು.
ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಬಂಗಾರಪ್ಪನವರ ಚಿಂತನೆ-ವಿಚಾರಗಳು ನಾಡಿನ ಜನತೆಗೆ ತಲುಪಬೇಕು. ಈ ಬಂಗಾರಧಾಮವು ಸ್ಫೂ ರ್ತಿಯ ನೆಲೆಯಾಗಬೇಕು. ಬಂಗಾರಪ್ಪನವರ ಹೆಸರನ್ನು ಉಳಿಸಿ-ಬೆಳೆಸಿಕೊಂಡು ಹೋಗುವ ಕಾರ್ಯ ಮಾಡುತ್ತೇನೆ. ಬಂಗಾರಪ್ಪನವರ ಚಿಂತನೆ ಅಧ್ಯಯನ ವಿಷಯವಾಗಬೇಕು ಎಂದರು.