Advertisement

ಕಾಫಿನಾಡಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ನಿವಾಸಿಗಳು: ಪೊಲೀಸ್‌ ದಾಳಿ

09:55 AM Jul 23, 2022 | Team Udayavani |

ಚಿಕ್ಕಮಗಳೂರು: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ನಿವಾಸಿಗಳು ಪತ್ತೆ ಎನ್.ಆರ್.ಪುರ ತಾಲೂಕಿನ ಸಿಂಸೆಯ ಬೋವಿ ಕಾಲೋನಿಯಲ್ಲಿ ಪತ್ತೆಯಾಗಿದ್ದಾರೆ.

Advertisement

ಅಬ್ದುಲ್, ರಹುಲ್, ಮೋಮಿನ್ ಅಲಿ, ಸಲೀಂ ಅಕ್ರಮವಾಗಿ ನೆಲೆಸಿದ್ದರು ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳದ ಮೂಲಕ ಕೂಲಿಗಾಗಿ ಭಾರತಕ್ಕೆ ಆಗಮಿಸಿದ್ದು, ಸುಮಾರು 3 ವರ್ಷಗಳಿಂದ‌ ಕಾಫಿ‌ನಾಡಲ್ಲಿ ಕೆಲಸ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ತಪಾಸನೆ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿದಾಗ ಬಾಂಗ್ಲಾದೇಶದ ಪ್ರಜೆಗಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕನ್ವರ್ ಭಕ್ತರ ಮೇಲೆ ಹರಿದ ಟ್ರಕ್: ಆರು ಮಂದಿ ಸಾವು, ಓರ್ವ ಗಂಭೀರ

ಈ ಹಿಂದೆಯೂ ಈ ಪ್ರದೇಶದಲ್ಲಿ ಬಾಂಗ್ಲಾ‌ ನಿವಾಸಿಗಳು ಅಕ್ರಮ ನೆಲೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಎನ್.ಆರ್.ಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next