Advertisement

Bangladesh Crisis: ವಿಶ್ವಸಂಸ್ಥೆ ಮಧ್ಯ ಪ್ರವೇಶಕ್ಕೆ ವಜ್ರದೇಹಿ ಶ್ರೀ ಆಗ್ರಹ

10:21 PM Aug 12, 2024 | Team Udayavani |

ಮಂಗಳೂರು: ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸುತ್ತೇವೆ. ಕೇಂದ್ರ ಸರಕಾರ ತತ್‌ಕ್ಷಣ ಅಲ್ಲಿರುವ ನಿರಾಶ್ರಿತ ಹಿಂದೂಗಳಿಗೆ ಪುನರ್ವಸತಿ ಕಲ್ಪಿಸುವ ಜತೆಗೆ ಯಾವುದೇ ಕಾರಣಕ್ಕೂ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಯದಂತೆ ನೋಡಿಕೊಳ್ಳುವಂತೆ ವಿಶ್ವಸಂಸ್ಥೆ ಮೇಲೆ ಒತ್ತಡ ಹೇರಬೇಕು. ಆ ಮೂಲಕವಾಗಿ ವಿಶ್ವಸಂಸ್ಥೆ ಮಧ್ಯ ಪ್ರವೇಶ ಮಾಡಿ ಬಾಂಗ್ಲಾ ದಂಗೆಯನ್ನು ತಡೆಯಬೇಕು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

Advertisement

ಸೋಮವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಹಿಂದೂಗಳ ಮೇಲೆ ಅಮಾನುಷವಾದ, ನಿರ್ಲಜ್ಜವಾದ ಕೃತ್ಯಗಳು ಬಾಂಗ್ಲಾದಲ್ಲಿ ನಡೆಯುತ್ತಿವೆ. ಇದನ್ನು ಪ್ರಸ್ತುತ ಅಧಿಕಾರಕ್ಕೆ ಬಂದಿರುವ ನೋಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್‌ ಯೂನುಸ್‌ ಅವರ ಸರಕಾರ ತಡೆಹಿಡಿಯಬೇಕು ಎಂದು ಆಗ್ರಹಿಸುತ್ತೇವೆ. ಮೀಸಲಾತಿ ವಿಚಾರವಾಗಿ ಆರಂಭವಾಗಿರುವ ಹೋರಾಟ ದಂಗೆಯಾಗಿ ಬದಲಾಗಿ ಅಲ್ಲಿ ಅಲ್ಪಸಂಖ್ಯಾಕರಾಗಿರುವ ಹಿಂದೂಗಳ ಮೇಲೆ ದೌರ್ಜನ್ಯ, ಅತ್ಯಾಚಾರ ಮಾಡಿ ಕೊಲೆ ಮಾಡುವ ದಾಷ್ಟ್ಯ ದ ರಾಜಕಾರಣ ಬಾಂಗ್ಲಾದಲ್ಲಿ ನಡೆಯುತ್ತಿರುವುದು ನೋವಿನ ವಿಚಾರವಾಗಿದೆ. ಜೆಹಾದಿ ಮನಸ್ಥಿತಿ ಇರುವವರಿಗೆ ಒಳ್ಳೆಯ ಬುದ್ಧಿಯನ್ನು ಕರುಣಿಸು ಎಂದು ಚಾತುರ್ಮಾಸ ವ್ರತದ ಈ ಸಂದರ್ಭದಲ್ಲಿ ಆರಾಧ್ಯ ದೇವರದಲ್ಲಿ ಪ್ರಾರ್ಥಿಸುತ್ತೇವೆ ಎಂದವರು ತಿಳಿಸಿದ್ದಾರೆ.

 

 

Advertisement

Udayavani is now on Telegram. Click here to join our channel and stay updated with the latest news.

Next